alex Certify ಇನ್ನು 12 ದಿನ ಹುಷಾರಾಗಿರಿ…! ಎಚ್ಚರ ತಪ್ಪಿದ್ರೆ ಹೆಚ್ಚಾಗುತ್ತೆ ಕೊರೊನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ನು 12 ದಿನ ಹುಷಾರಾಗಿರಿ…! ಎಚ್ಚರ ತಪ್ಪಿದ್ರೆ ಹೆಚ್ಚಾಗುತ್ತೆ ಕೊರೊನಾ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿದ್ದು, ಚಳಿಗಾಲ, ಕ್ರಿಸ್ಮಸ್, ಹೊಸ ವರ್ಷದ ಕಾರಣ ಕೊರೋನಾ ಹೆಚ್ಚುವ ಆತಂಕ ಎದುರಾಗಿದೆ.

ನಿರ್ಲಕ್ಷ್ಯ ವಹಿಸಿದರೆ ಕೊರೋನಾ ಸೋಂಕು ಹೆಚ್ಚಾಗುವ ಕುರಿತಾಗಿ ಎಚ್ಚರಿಕೆ ನೀಡಲಾಗಿದೆ. ರಾಜ್ಯದಲ್ಲಿ ಕೊರೋನಾ ಸೋಂಕು ಏರಿಕೆಯಾಗಬಹುದು ಎಂದು ತಾಂತ್ರಿಕ ಸಲಹಾ ಸಮಿತಿಯ ತಜ್ಞರು ವಾರ್ನಿಂಗ್ ಮಾಡಿದ್ದಾರೆ.

ಮುಂದಿನ 12 ದಿನಗಳ ಕಾಲ ಕೊರೋನಾ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಸೋಂಕಿನ ಆರ್ಭಟ ಹೆಚ್ಚಾಗುವ ಸಾಧ್ಯತೆ ಇದೆ. ಡಿಸೆಂಬರ್ 20 ರಿಂದ ಜನವರಿ 2 ರವರೆಗೆ ಡೇಂಜರ್ ಟೈಮ್ ಆಗಿದೆ. ಕ್ರಿಸ್ಮಸ್, ಹೊಸ ವರ್ಷದ ಸಂಭ್ರಮಾಚರಣೆ, ವೀಕೆಂಡ್ ಮಸ್ತಿಯಿಂದ ಎಡವಟ್ಟಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಸಾಮಾಜಿಕ ಅಂತರ ಸೇರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...