alex Certify ಪ್ರೊಫೈಲ್ ಪಿಕ್ಚರ್ ಡಿಲಿಟ್; ದರ್ಶನ್ ಅನ್ ಫಾಲೋ ಮಾಡಿದ ಪತ್ನಿ ವಿಜಯಲಕ್ಷ್ಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೊಫೈಲ್ ಪಿಕ್ಚರ್ ಡಿಲಿಟ್; ದರ್ಶನ್ ಅನ್ ಫಾಲೋ ಮಾಡಿದ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು: ಪವಿತ್ರಾ ಗೌಡಗಾಗಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವ ಆರೋಪದಲ್ಲಿ ಬಂಧನಕ್ಕೀಡಾಗಿರುವ ನಟ ದರ್ಶನ್ ನಡೆ ಪತ್ನಿ ವಿಜಯಲಕ್ಷ್ಮಿಗೆ ಅಘಾತವನ್ನುಂಟುಮಾಡಿದೆ.

ಘಟನೆಗಳಿಂದ ಬೇಸರಗೊಂಡಿರುವ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಒಂದೆಡೆ ಮೌನಕ್ಕೆ ಶರಣಾಗಿದ್ದರೆ ಇನ್ನೊಂದೆಡೆ ಇನ್ ಸ್ಟಾಗ್ರಾಮ್ ನಲ್ಲಿ ದರ್ಶನ್ ಅನ್ ಫಾಲೋ ಮಾಡಿದ್ದಾರೆ.

ದರ್ಶನ್ ಹಾಗೂ ಗ್ಯಾಂಗ್ ನ್ನ್ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಘಟನೆ ಬಳಿಕ ವಿಜಯಲಕ್ಷ್ಮಿಸೋಷಿಯಲ್ ಮೀಡಿಯಾಗಳಲ್ಲಿಯೂ ಕಣಿಸಿಕೊಂಡಿಲ್ಲ, ಯಾವುದೇ ಪೋಸ್ಟ್ ಹಾಕಿಲ್ಲ. ಈ ನಡುವೆ ವಿಜಯಲಕ್ಷ್ಮಿ ಇನ್ ಸ್ಟಾಗ್ರಾಂ ಪ್ರೊಫೈಲ್ ಫೋಟೋ ಡಿಲಿಟ್ ಮಾಡಿದ್ದಾರೆ. ನಟ ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ. ವಿಜಯಲಕ್ಷ್ಮಿ ಅವರ ಈ ನಡೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೆಜ್ ಕಳುಹಿಸಿದ್ದ ಎಂಬ ಕರಣಕ್ಕೆ ರೇಣುಸ್ವಾಮಿಯನ್ನು ಹತ್ಯೆಗೈದ ಆರೋಪದಲ್ಲಿ ನಟ ದರ್ಶನ್ ಸೇರಿದಂತೆ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...