alex Certify ಭಾನುವಾರದಂದು ಅನ್ನದಾತರೊಂದಿಗೆ ಕಾಲ ಕಳೆಯಲಿದ್ದಾರೆ ನಟ ದರ್ಶನ್..​..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾನುವಾರದಂದು ಅನ್ನದಾತರೊಂದಿಗೆ ಕಾಲ ಕಳೆಯಲಿದ್ದಾರೆ ನಟ ದರ್ಶನ್..​..!

ರಾಜ್ಯ ಕೃಷಿ ಇಲಾಖೆಯ ಬ್ರ್ಯಾಂಡ್​ ಅಂಬಾಸಿಡರ್​ ಆಗಿರುವ ಚಾಲೆಂಜಿಂಗ್​ ಸ್ಟಾರ್​ ದರ್ಶನ್​​ ಭಾನುವಾರದಂದು ಇಡೀ ದಿನ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ರೈತರೊಂದಿಗೆ ಕಾಲ ಕಳೆಯಲಿದ್ದಾರೆ. ‘ರೈತರಿಗಾಗಿ ಒಂದು ದಿನ’ ಕಾರ್ಯಕ್ರಮದಲ್ಲಿ ನಟ ದರ್ಶನ್​ಗೆ ಕೃಷಿ ಸಚಿವ ಬಿ.ಸಿ. ಪಾಟೀಲ್​ ಕೂಡ ಸಾಥ್​ ನೀಡಲಿದ್ದಾರೆ.

ಕೃಷಿ ಸಚಿವ ಬಿ.ಸಿ. ಪಾಟೀಲ್​ ನಡೆಸುತ್ತಿರುವ ‘ರೈತರಿಗಾಗಿ ಒಂದು ದಿನ’ ಕಾರ್ಯಕ್ರಮವು ನವೆಂಬರ್​ ಮೊದಲ ವಾರದಲ್ಲಿ ನಡೆಯಬೇಕಿತ್ತು. ಆದರೆ ನಟ ಪುನೀತ್​ ರಾಜ್​ಕುಮಾರ್​ ನಿಧನದಿಂದಾಗಿ ಮುಂದೂಡಲ್ಪಟ್ಟಿತ್ತು. ಇದೀಗ ಭಾನುವಾರ ದರ್ಶನ್​​ ರೈತರೊಂದಿಗೆ ಒಂದಿಡೀ ದಿನ ಕಾಲ ಕಳೆಯಲಿದ್ದಾರೆ.

ಭಾನುವಾರದಂದು ದರ್ಶನ್​, ರೈತರಿಗೆ ಕೃಷಿ ಕ್ಷೇತ್ರದಲ್ಲಿ ಲಾಭ ಗಳಿಸಲು ಸರ್ಕಾರದ ಯೋಜನೆಗಳನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದರ ಬಗ್ಗೆ ಮಾರ್ಗದರ್ಶನ ನೀಡಲಿದ್ದಾರೆ.

ಹಸುಗಳು, ಕುದುರೆ, ನವಿಲು ಸೇರಿದಂತೆ ಸಾಕಷ್ಟು ಪ್ರಾಣಿ – ಪಕ್ಷಿಗಳನ್ನು ಪೋಷಿಸುತ್ತಿರುವ ನಟ ದರ್ಶನ್​​ರನ್ನು ರಾಜ್ಯ ಸರ್ಕಾರ ಕೃಷಿ ಇಲಾಖೆಯ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಇದರ ಜೊತೆಯಲ್ಲಿ ದರ್ಶನ್ ಕರ್ನಾಟಕ ಅರಣ್ಯ ಇಲಾಖೆಯ ಬ್ರ್ಯಾಂಡ್​ ಅಂಬಾಸಿಡರ್​ ಕೂಡ ಆಗಿದ್ದಾರೆ. ಮೂಲಗಳ ಪ್ರಕಾರ ನಟ ದರ್ಶನ್​ ಈ ರಾಯಭಾರತ್ವಕ್ಕೆ ಸರ್ಕಾರದಿಂದ ಯಾವುದೇ ಸಂಭಾವನೆಯನ್ನು ಪಡೆಯುತ್ತಿಲ್ಲ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...