alex Certify ಬೆಂಗಳೂರಲ್ಲಿ ಅಮಾನುಷ ಘಟನೆ: ಮಾತು ಬರುತ್ತಿಲ್ಲ ಎಂದು ಮಗುವನ್ನೇ ಕೊಂದ ತಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಅಮಾನುಷ ಘಟನೆ: ಮಾತು ಬರುತ್ತಿಲ್ಲ ಎಂದು ಮಗುವನ್ನೇ ಕೊಂದ ತಾಯಿ

ಬೆಂಗಳೂರು: ಮಾತು ಬರುತ್ತಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಯೇ ತನ್ನ ಮೂರು ವರ್ಷ 10 ತಿಂಗಳ ಬುದ್ಧಿಮಾಂದ್ಯ ಹೆಣ್ಣು ಮಗುವಿನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಘಟನೆ ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರೀತಿಕಾ ಕೊಲೆಯಾದ ಮಗು. ಚಿಕ್ಕಲ್ಲಸಂದ್ರ ಮಂಜುನಾಥ ನಗರದ ಸಿರಿ ಅಪಾರ್ಟ್ಮೆಂಟ್ ನಿವಾಸಿ ರಮ್ಯಾ(35) ಕೊಲೆ ಮಾಡಿದ ಆರೋಪಿ. ಗುರುವಾರ ಮಧ್ಯಾಹ್ನ ಘಟನೆ ನಡೆದಿದೆ. ಆರೋಪಿ ರಮ್ಯಾ ಮತ್ತು ವೆಂಕಟೇಶ್ ಕೃಷ್ಣನ್ 10 ವರ್ಷದ ಹಿಂದೆ ಮದುವೆಯಾಗಿದ್ದು, ದಂಪತಿಗೆ ಮೂರು ವರ್ಷ 10 ತಿಂಗಳ ಅವಳಿ ಮಕ್ಕಳಿದ್ದಾರೆ. ಪ್ರೀತಿಕಾ ಬುದ್ಧಿಮಾಂದ್ಯೆಯಾಗಿದ್ದು, ಮಾತು ಬರುತ್ತಿರಲಿಲ್ಲ. ಇದರಿಂದ ಬೇಸರಗೊಂಡ ರಮ್ಯಾ ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಪರೀಕ್ಷಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ನಂತರ ವಾಜರಹಳ್ಳಿಯಲ್ಲಿರುವ ಮೈದುನನಿಗೆ ಕರೆ ಮಾಡಿದ ರಮ್ಯಾ ವಿಚಾರ ತಿಳಿಸಿದ್ದಾಳೆ. ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೆಂಕಟೇಶ್ ನಾರ್ವೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕೆಲವು ವರ್ಷ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ರಮ್ಯಾ ನಂತರ ಕೆಲಸ ಬಿಟ್ಟು ಅವಳಿ ಮಕ್ಕಳನ್ನು ನೋಡಿಕೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...