alex Certify ಸಚಿವ ಜಗದೀಶ್ ಶೆಟ್ಟರ್ ಪುತ್ರ ತೆರಳುತ್ತಿದ್ದ ಕಾರ್ ಗೆ ಲಾರಿ ಡಿಕ್ಕಿಯಾಗಿ ಅಪಘಾತ, ದಂಪತಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಜಗದೀಶ್ ಶೆಟ್ಟರ್ ಪುತ್ರ ತೆರಳುತ್ತಿದ್ದ ಕಾರ್ ಗೆ ಲಾರಿ ಡಿಕ್ಕಿಯಾಗಿ ಅಪಘಾತ, ದಂಪತಿಗೆ ಗಾಯ

ದಾವಣಗೆರೆ: ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಪ್ರಶಾಂತ್ ಶೆಟ್ಟರ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ.

ದಾವಣಗೆರೆ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದ್ದು ಪ್ರಶಾಂತ್ ಶೆಟ್ಟರ್ ಮತ್ತು ಅವರ ಪತ್ನಿ ಅಂಚಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ದಾವಣಗೆರೆ ಖಾಸಗಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ.

ಶೆಟ್ಟರ್ ಪುತ್ರ ಪ್ರಯಾಣಿಸುತ್ತಿದ್ದ ಲ್ಯಾಂಡ್ ರೋವರ್ ದಿಸ್ಕವರಿ ಕಾರ್ ಗೆ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ದಾವಣಗೆರೆಯಿಂದ ಹುಬ್ಬಳ್ಳಿಗೆ ಪ್ರಶಾಂತ್ ಶೆಟ್ಟರ್ ಪ್ರಯಾಣ ಬೆಳೆಸುತ್ತಿದ್ದರು ಎನ್ನಲಾಗಿದೆ. ದಾವಣಗೆರೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...