alex Certify ಅರ್ಜಿ ಸಲ್ಲಿಸಿದ 24 ಗಂಟೆಯೊಳಗೆ ಅನುಕಂಪದ ನೌಕರಿ ನೀಡಿದ ಜಿಲ್ಲಾಧಿಕಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರ್ಜಿ ಸಲ್ಲಿಸಿದ 24 ಗಂಟೆಯೊಳಗೆ ಅನುಕಂಪದ ನೌಕರಿ ನೀಡಿದ ಜಿಲ್ಲಾಧಿಕಾರಿ

ಯಾದಗಿರಿ: ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಅನುಕಂಪದ ನೌಕರಿಗಾಗಿ ಅರ್ಜಿ ಸಲ್ಲಿಸಿದ ಯುವಕನಿಗೆ 24 ಗಂಟೆಯೊಳಗೆ ಉದ್ಯೋಗ ನೀಡಿ ಮಾನವೀಯತೆ ತೋರಿದ್ದಾರೆ.

ಯಾದಗಿರಿ ತಹಶೀಲ್ದಾರ್ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಶುಭಲಕ್ಷ್ಮಿ ಮಲ್ಲಿಕಾರ್ಜುನ 2021 ರ ಆಗಸ್ಟ್ 21 ರಂದು ನಿಧನರಾಗಿದ್ದರು. ಅವರು ಗ್ರೂಪ್ ಡಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರ ಮಗ ಗಿರೀಶಕುಮಾರ್ ಅನುಕಂಪದ ಆಧಾರದ ಮೇಲೆ ಡಿ ಗ್ರೂಪ್ ಹುದ್ದೆಗೆ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದು. ಅವರ ಅರ್ಜಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಸ್ನೇಹಲ್ ಅವರು ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರೂಪ್ ಡಿ ಸಿಪಾಯಿ ಹುದ್ದೆಗೆ ನೇಮಕಾತಿ ಆದೇಶ ನೀಡಿದ್ದಾರೆ. ತಹಶೀಲ್ದಾರ್ ಕಾರ್ಯಾಲಯದಲ್ಲಿ ಖಾಲಿ ಇರುವ ಡಿ ಗ್ರೂಪ್ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶ ಪತ್ರ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...