ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನ ಎರಡು ಸ್ಥಳಗಳಿಗೆ ಭೇಟಿ ನೀಡಲಿದ್ದು, ರಸ್ತೆಯಲ್ಲಿ ತೆರಳುವ ವೇಳೆ ಬೆಂಗಾವಲು ವಾಹನ ದಾರಿ ತಪ್ಪಿದ ಘಟನೆ ನಡೆದಿದೆ.
ಡಿಕೆ ಶಿವಕುಮಾರ್ ಅವರಿದ್ದ ವಾಹನ ಬಿಟ್ಟು ಎಸ್ಕಾರ್ಟ್ ವಾಹನ ಮುಂದೆ ಹೋಗಿದ್ದು, ಬಳಿಕ ತಿರುವು ತೆಗೆದುಕೊಂಡು ವಾಪಸ್ ಬಂದಿದೆ. ಅಲ್ಲಿಯ ತನಕ ಮಾರ್ಗಮಧ್ಯೆ ಡಿಕೆ ಶಿವಕುಮಾರ್ ವಾಹನ ನಿಲ್ಲಿಸಿದ್ದಾರೆ. ನಂತರ ಎಸ್ಕಾರ್ಟ್ ವಾಹನ ವಾಪಸ್ ಬಂದ ಬಳಿಕ ಡಿಸಿಎಂ ಮುಂದೆ ಸಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳ್ಳಂಬೆಳಗ್ಗೆ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ಸಾರ್ಜನಿಕರ ಜೊತೆಗೆ ಉಪಹಾರ ಸೇವಿಸಿದ್ದಾರೆ.ಬೆಂಗಳೂರಿನ ದಾಸರಹಳ್ಳಿಯಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದಿರಾ ಕ್ಯಾಂಟೀನ್ ನಲ್ಲಿ ಸಾರ್ವಜನಿಕರ ಜೊತೆಗೆ ಕೂತು ಉಪಹಾರ ಸೇವಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಮೊದಲು ಬೆಳಗ್ಗೆ ಬೆಂಗಳೂರಿನ ಚೊಕ್ಕಸಂದ್ರದ ಇಂದಿರಾ ಕ್ಯಾಂಟೀನ್ ಗೆ ಹೋಗಿದ್ದರು. ಅಲ್ಲಿ ತಿಂಡಿ ಖಾಲಿಯಾದ ಹಿನ್ನೆಲೆಯಲ್ಲಿ ದಾಸರಹಳ್ಳಿರುವ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿದ್ದು, ಅಲ್ಲಿ ಸಾರ್ವಜನಿಕರ ಜೊತೆಗೆ ಕೂತು ಕೇಸರಿಬಾತ್, ಉಪ್ಪಿಟ್ಟು ಸೇವನೆ ಮಾಡಿದ್ದಾರೆ.