alex Certify SHOCKING: ಆಟವಾಡುವಾಗಲೇ ಕಾದಿತ್ತು ದುರ್ವಿಧಿ, ಮೂವರು ಮಕ್ಕಳ ಜೀವತೆಗೆದ ಜೋಕಾಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಆಟವಾಡುವಾಗಲೇ ಕಾದಿತ್ತು ದುರ್ವಿಧಿ, ಮೂವರು ಮಕ್ಕಳ ಜೀವತೆಗೆದ ಜೋಕಾಲಿ

ಬೆಂಗಳೂರು: ಕೊಡಗು ಮತ್ತು ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ದುರಂತದಲ್ಲಿ ಜೋಕಾಲಿಗೆ ಸಿಲುಕಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಉಂಜಿನಳ್ಳಿ ಗ್ರಾಮದಲ್ಲಿ ಜೋಕಾಲಿ ಕಟ್ಟಿಕೊಂಡು ಆಟವಾಡುತ್ತಿದ್ದ ಸಂದರ್ಭದಲ್ಲಿ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು 15 ವರ್ಷದ ಮನಿಕ್ಷಾ ಮತ್ತು 12 ವರ್ಷದ ಪೂರ್ಣೇಶ್ ಮೃತಪಟ್ಟಿದ್ದಾರೆ. ಹೆಚ್.ಆರ್. ಗಿರೀಶ್ ಅವರ ಮಕ್ಕಳಾದ ಮನಿಕ್ಷಾ ಮತ್ತು ಪೂರ್ಣೇಶ್ ಅಜ್ಜನ ಮನೆಯಲ್ಲಿ ಜೋಕಾಲಿ ಆಡುವಾಗ ಕುತ್ತಿಗೆಗೆ ಸುತ್ತಿಕೊಂಡು ಸಾವನ್ನಪ್ಪಿದ್ದಾರೆ. ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಚೆಂಬು ಪನೇಡ್ಕದಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದ 10 ವರ್ಷದ ಭರತ್ ಮೃತಪಟ್ಟಿದ್ದಾನೆ. ತಾರಾ ಕುಮಾರ್ ಅವರ ಪುತ್ರ ಜೋಕಾಲಿಯಲ್ಲಿ ಆಡುವಾಗ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಉಸಿರುಗಟ್ಟಿ ಮೃತಪಟ್ಟಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...