alex Certify ಮೃತನ ವಿವಾಹೇತರ ಸಂಬಂಧದ ಸಂತಾನಕ್ಕೂ ಪರಿಹಾರದ ಹಕ್ಕು ಇದೆ: ಹೈಕೋರ್ಟ್ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೃತನ ವಿವಾಹೇತರ ಸಂಬಂಧದ ಸಂತಾನಕ್ಕೂ ಪರಿಹಾರದ ಹಕ್ಕು ಇದೆ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಮೋಟಾರು ವಾಹನ ಅಪಘಾತದಲ್ಲಿ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಮೃತನ ವಿವಾಹೇತರ ಸಂತಾನಕ್ಕೂ ಪರಿಹಾರದಲ್ಲಿ ಹಕ್ಕು ಇದೆ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರಿದ್ದ ಹೈಕೋರ್ಟ್ ಪೀಠದಿಂದ ಆದೇಶ ನೀಡಲಾಗಿದೆ.

2012 ರಲ್ಲಿ ಮಲ್ಲಿಕಾರ್ಜುನ ಎಂಬುವವರು ಅಪಘಾತದಲ್ಲಿ ಮೃತಪಟ್ಟಿದ್ದರು. ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆ ಮತ್ತು ಪುತ್ರ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದರು. ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಗೆ ಪರಿಹಾರದ ಹಕ್ಕು ಇಲ್ಲ. ಆದರೆ, ಆ ಸಂಬಂಧಕ್ಕೆ ಹುಟ್ಟಿದ ಪುತ್ರನಿಗೆ ಪರಿಹಾರದಲ್ಲಿ ಹಕ್ಕಿದೆ. ಮೃತನ ತಂದೆ ತಾಯಿಗೆ ಪರಿಹಾರದ ತಲಾ ಶೇಕಡ 30ರಷ್ಟು ನೀಡಬೇಕು. ಮೃತನ ಪುತ್ರನಿಗೆ ಪರಿಹಾರದ ಶೇಕಡ 40ರಷ್ಟು ನೀಡಬೇಕು ಎಂದು ವಿಮಾ ಕಂಪನಿಗೆ ಹೈಕೋರ್ಟ್ ಏಕ ಸದಸ್ಯ ಪೀಠ ನಿರ್ದೇಶನ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...