alex Certify ರಸ್ತೆ ಗುಂಡಿಗಳಲ್ಲಿ ಪಟಾಕಿ ಸಿಡಿಸಿ ವಿನೂತನ ಪ್ರತಿಭಟನೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆ ಗುಂಡಿಗಳಲ್ಲಿ ಪಟಾಕಿ ಸಿಡಿಸಿ ವಿನೂತನ ಪ್ರತಿಭಟನೆ…!

ಬೆಂಗಳೂರಿನ ರಸ್ತೆ ಗುಂಡಿಗಳ ಕಥೆ ಸದ್ಯಕ್ಕೆ ಮುಗಿಯದು ಎಂಬಂತಾಗಿದೆ. ರಸ್ತೆಗುಂಡಿ ಪರಿಣಾಮ ಈಗಾಗಲೇ ಹಲವರು ಸಾವನ್ನಪ್ಪಿದ್ದು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಲೇ ಇದೆ.

ಇಷ್ಟಾದರೂ ರಸ್ತೆ ಗುಂಡಿಗಳನ್ನು ಸರಿ ಮಾಡದಿರುವುದಕ್ಕೆ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಶ್ರೀನಗರ ನಿವಾಸಿಗಳು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ದೀಪಾವಳಿ ಸಂದರ್ಭದಲ್ಲಿ ರಸ್ತೆ ಗುಂಡಿಗಳ ಮಧ್ಯೆ ಪಟಾಕಿ ಸಿಡಿಸಲಾಗಿದ್ದು, ಮಹಾನಗರ ಪಾಲಿಕೆ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತಪಡಿಸಲಾಗಿದೆ. ಇದರಿಂದಲಾದರೂ ಪಾಲಿಕೆ ಎಚ್ಚೆತ್ತುಕೊಳ್ಳುತ್ತದಾ ಎಂಬುದನ್ನು ಕಾದು ನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...