alex Certify ಪ್ರಯಾಣಿಕರಿಗೆ ಗುಡ್ ನ್ಯೂಸ್: ದೀಪಾವಳಿಗೆ ವಿಶೇಷ ಎಕ್ಸ್ ಪ್ರೆಸ್ ರೈಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಗುಡ್ ನ್ಯೂಸ್: ದೀಪಾವಳಿಗೆ ವಿಶೇಷ ಎಕ್ಸ್ ಪ್ರೆಸ್ ರೈಲು

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ನೈರುತ್ಯ ರೈಲ್ವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ -ಚೆನ್ನೈ ಎಗ್ಮೂರ್ ನಿಲ್ದಾಣಗಳ ನಡುವೆ ಎರಡು ಟ್ರಿಪ್, ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಸ್ವಾಮೀಜಿ ನಿಲ್ದಾಣ- ಮಂಗಳೂರು ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಓಡಿಸಲಾಗುವುದು.

ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ -ಚೆನ್ನೈ ಎಗ್ಮೋರ್ ನಿಲ್ದಾಣಗಳ ನಡುವೆ ವಿಶೇಷ ರೈಲು ಅಕ್ಟೋಬರ್ 30 ಮತ್ತು ನವೆಂಬರ್ 3ರಂದು ಬೆಳಗ್ಗೆ 8.05ಕ್ಕೆ ಬೆಂಗಳೂರಿನಿಂದ ಹೊರಟು ಅದೇ ದಿನ ಮಧ್ಯಾಹ್ನ 2:30ಕ್ಕೆ ಚೆನ್ನೈ ತಲುಪಲಿದೆ. ಅಕ್ಟೋಬರ್ 30 ಮತ್ತು ನವೆಂಬರ್ 3ರಂದು ಮಧ್ಯಾಹ್ನ 3:55 ಕ್ಕೆ ಚೆನ್ನೈ ಎಗ್ಮೋರ್ ನಿಲ್ದಾಣದಿಂದ ಹೊರಟು ಅದೇ ದಿನ ರಾತ್ರಿ 10:50ಕ್ಕೆ ಬೆಂಗಳೂರು ತಲುಪಲಿದೆ.

ವಿಶೇಷ ಎಕ್ಸ್ ಪ್ರೆಸ್ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ನಿಲ್ದಾಣದಿಂದ ನ. 2ರಂದು ಸಂಜೆ ಗಂಟೆಗೆ ಹೊರಟು ಮರುದಿನ ಬೆಳಗ್ಗೆ 11:25ಕ್ಕೆ ಮಂಗಳೂರು ನಿಲ್ದಾಣ ತಲುಪಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...