alex Certify BIG NEWS: ಏರ್ಪೋರ್ಟ್ ನಲ್ಲೇ ಆಘಾತಕಾರಿ ಘಟನೆ, ಹಿಮದ ದಿಬ್ಬಕ್ಕೆ ವಿಮಾನ ಡಿಕ್ಕಿ, ಅದೃಷ್ಟವಶಾತ್ ಪ್ರಯಾಣಿಕರು ಪಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಏರ್ಪೋರ್ಟ್ ನಲ್ಲೇ ಆಘಾತಕಾರಿ ಘಟನೆ, ಹಿಮದ ದಿಬ್ಬಕ್ಕೆ ವಿಮಾನ ಡಿಕ್ಕಿ, ಅದೃಷ್ಟವಶಾತ್ ಪ್ರಯಾಣಿಕರು ಪಾರು

ಶ್ರೀನಗರ: ಶ್ರೀನಗರ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ಹಿಮದ ದಿಬ್ಬಕ್ಕೆ ಡಿಕ್ಕಿ ಹೊಡೆದಿದ್ದು, ನಂತರ ಪೈಲೆಟ್ ಸುರಕ್ಷಿತವಾಗಿ ವಿಮಾನವನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ದೆಹಲಿಯಿಂದ ಹೊರಟ ಇಂಡಿಗೋ ವಿಮಾನ ಟ್ಯಾಕ್ಸಿ ವೇ ಪಕ್ಕದಲ್ಲಿ ಸಂಗ್ರಹವಾಗಿದ್ದ ಹಿಮದ ಗುಡ್ಡೆಗೆ ಡಿಕ್ಕಿ ಹೊಡೆದಿದೆ. ಶ್ರೀನಗರ -ದೆಹಲಿ ವಿಮಾನವನ್ನು ಸ್ಥಗಿತಗೊಳಿಸಲಾಗಿದ್ದು, ಹೆಚ್ಚಿನ ಪರಿಶೀಲನೆಗಾಗಿ ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿದೆ ಎಂದು ವಿಮಾನಯಾನ ಸಚಿವಾಲಯ ತಿಳಿಸಿದೆ.

ದೆಹಲಿಯಿಂದ ಹೊರಟ ವಿಮಾನ ಶ್ರೀನಗರ ಏರ್ಪೋರ್ಟ್ ನಲ್ಲಿ ಹಿಮದ ದಿಬ್ಬಕ್ಕೆ ಡಿಕ್ಕಿ ಹೊಡೆದಿದೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...