ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಸದ್ಯದ ಮಾಹಿತಿ ಪ್ರಕಾರ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹಿನ್ನಡೆಯಲ್ಲಿದೆ. ಬಿಜೆಪಿ ಮ್ಯಾಜಿಕ್ ಸಂಖ್ಯೆ ದಾಟಿದ್ದು, ಮುನ್ನಡೆ ಕಾಯ್ದುಕೊಂಡಿದೆ.
ಆಮ್ ಆದ್ಮಿ ಪಕ್ಷದ ಘಟಾನುಘಟಿ ನಾಯಕರೇ ಹಿನ್ನಡೆಯಲ್ಲಿದ್ದಾರೆ. ದೆಹಲಿ ಅಬಕಾರಿ ಹಗರಣದಲ್ಲಿ ಜೈಲುಪಾಲಾಗಿದ್ದ ಮೂವರು ನಾಯಕರಿಗೆ ತೀವ್ರ ಹಿನ್ನಡೆಯಾಗಿದೆ.
ಆಪ್ ಸಂಸ್ಥಾಪಕ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಮೂವರು ನಾಯಕರೂ ಹಿನ್ನಡೆಯಲ್ಲಿದ್ದಾರೆ.
ಆಪ್ 27 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ ಬಿಜೆಪಿ 42 ಹಾಗೂ ಕಾಂಗ್ರೆಸ್ 1 ಸ್ಥಾನದಲ್ಲಿ ಮುನ್ನಡೆಯಲ್ಲಿದೆ. ಈ ಮೂಲಕ ಬಿಜೆಪಿ ಮ್ಯಾಜಿಕ್ ಸಂಖ್ಯೆಯನ್ನೂ ದಾಟಿ ಮುನ್ನಡೆ ಕಾಯ್ದುಕೊಂಡಿದೆ. ವಿಶೇಷವೆಂದರೆ ಮುಸ್ಲಿಂ ಪ್ರಾಬಲವಿರುವ ಕ್ಷೇತ್ರಗಳಲ್ಲಿಯೂ ಬಿಜೆಪಿ ಮುನ್ನಡೆಯಲ್ಲಿದೆ.