alex Certify ಚುನಾವಣೆಗೆ ಟಿಕೆಟ್ ನಿರಾಕರಿಸಿದ್ದಕ್ಕೆ ಟವರ್ ಏರಿದ ಆಕಾಂಕ್ಷಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆಗೆ ಟಿಕೆಟ್ ನಿರಾಕರಿಸಿದ್ದಕ್ಕೆ ಟವರ್ ಏರಿದ ಆಕಾಂಕ್ಷಿ

ನವದೆಹಲಿ: ಎಂಸಿಡಿ ಚುನಾವಣೆಗೆ ಟಿಕೆಟ್ ನಿರಾಕರಿಸಿದ್ದರಿಂದ ಮಾಜಿ ಎಎಪಿ ಕೌನ್ಸಿಲರ್ ಟ್ರಾನ್ಸ್‌ ಮಿಷನ್ ಟವರ್ ಹತ್ತಿದ ಘಟನೆ ನಡೆದಿದೆ.

ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಟಿಕೆಟ್‌ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಆಪ್‌ ಮಾಜಿ ಕೌನ್ಸಿಲರ್‌ ಹಸೀಬ್‌ ಉಲ್‌ ಹಸನ್‌ ಭಾನುವಾರ ಶಾಸ್ತ್ರಿ ಪಾರ್ಕ್‌ ಮೆಟ್ರೊ ನಿಲ್ದಾಣದ ಬಳಿಯ ಟ್ರಾನ್ಸ್‌ಮಿಷನ್‌ ಟವರ್‌ ಏರಿದ್ದಾರೆ. ಸ್ಥಳೀಯರು, ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳದಲ್ಲಿದ್ದಾರೆ. ಹಸೀಬ್ ಮನವೊಲಿಸಿ ಕೆಳಗಿಳಿಸಲು ಪ್ರಯತ್ನ ನಡೆಸಿದ್ದಾರೆ.

ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್‌ಗೆ ಡಿಸೆಂಬರ್ 4 ರಂದು ನಡೆಯಲಿರುವ ಚುನಾವಣೆಗೆ ಆಮ್ ಆದ್ಮಿ ಪಕ್ಷವು ತನ್ನ 117 ಅಭ್ಯರ್ಥಿಗಳ ಎರಡನೇ ಮತ್ತು ಅಂತಿಮ ಪಟ್ಟಿಯನ್ನು ಶನಿವಾರ ಪ್ರಕಟಿಸಿದ ನಂತರ ಈ ಬೆಳವಣಿಗೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...