alex Certify ಡಿಟೋನೇಟರ್ ಸ್ಪೋಟಗೊಂದು ಇಬ್ಬರು ಮಕ್ಕಳಿಗೆ ಗಾಯ, ಬಾಂಬ್ ನಿಷ್ಕ್ರಿಯದಳ ಪರಿಶೀಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಟೋನೇಟರ್ ಸ್ಪೋಟಗೊಂದು ಇಬ್ಬರು ಮಕ್ಕಳಿಗೆ ಗಾಯ, ಬಾಂಬ್ ನಿಷ್ಕ್ರಿಯದಳ ಪರಿಶೀಲನೆ

ಹಾಸನ: ಡಿಟೋನೇಟರ್ ಸ್ಫೋಟಗೊಂಡು ಇಬ್ಬರು ಮಕ್ಕಳು ಗಾಯಗೊಂಡ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನೇನಹಳ್ಳಿಯಲ್ಲಿ ನಡೆದಿದೆ.

ಅಭಿಷೇಕ್(12), ಕೃತಿಕಾ(8) ಗಾಯಗೊಂಡವರು ಎಂದು ಹೇಳಲಾಗಿದೆ. ಎತ್ತಿನಹೊಳೆ ಕಾಮಗಾರಿಗಾಗಿ ತಂದಿದ್ದ ಡಿಟೋನೇಟರ್ ಗಳನ್ನು ಕಾಮಗಾರಿ ಮುಗಿದ ನಂತರ ಸಿಬ್ಬಂದಿ ಬಿಟ್ಟುಹೋಗಿದ್ದರು. ಅವುಗಳನ್ನು ತಂದು ಮಕ್ಕಳು ಆಟವಾಡುತ್ತಿದ್ದಾಗ ಸ್ಫೋಟವಾಗಿದೆ. ಘಟನೆಯಲ್ಲಿ ಮಕ್ಕಳಿಬ್ಬರು ಗಾಯಗೊಂಡಿದ್ದು, ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...