alex Certify ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ದರ್ಶನ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ದರ್ಶನ ಅವಧಿ ವಿಸ್ತರಣೆ

ಪಟ್ಟಣಂತಿಟ್ಟ: ಕೇರಳದ ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಭಾರಿ ಸಂಖ್ಯೆಯ ಭಕ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದರ್ಶನದ ಅವಧಿಯನ್ನು ಒಂದು ಗಂಟೆ ವಿಸ್ತರಿಸಲಾಗಿದೆ.

ದರ್ಶನದ ದ್ವಿತೀಯ ಚರಣದಲ್ಲಿ ಒಂದು ಗಂಟೆ ಮುಂಚಿತವಾಗಿ ಬಾಗಿಲು ತೆರೆಯಲಾಗುವುದು. 4 ಗಂಟೆಯ ಬದಲಾಗಿ 3 ಗಂಟೆಯಿಂದಲೇ ದೇಗುಲದ ಬಾಗಿಲು ತೆರೆದು ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು.

ನವೆಂಬರ್ 16ರಿಂದ ಮಕರವಿಳಕ್ಕು ಪ್ರಯುಕ್ತ ದರ್ಶನ ಆರಂಭವಾಗಿದ್ದು, ಪ್ರತಿದಿನ ಸರಾಸರಿ 1.20 ಲಕ್ಷ ಜನ ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಹೀಗಾಗಿ ದರ್ಶನದ ಅವಧಿಯನ್ನು ಒಂದು ಗಂಟೆ ಹೆಚ್ಚಳ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...