alex Certify 16 ಚಿನ್ನದ ಪದಕ ಪಡೆದ ಕೋಲಾರ ವಿದ್ಯಾರ್ಥಿನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

16 ಚಿನ್ನದ ಪದಕ ಪಡೆದ ಕೋಲಾರ ವಿದ್ಯಾರ್ಥಿನಿ

ಬಾಗಲಕೋಟೆ: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗಿದೆ. ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಧರಣಿ ಶೆಟ್ಟಿ 16 ಚಿನ್ನದ ಪದಕ ಪಡೆದಿದ್ದಾರೆ.

ಕೃಷಿ ಬಗ್ಗೆ ಆಸಕ್ತಿ ಹೊಂದಿದ ವಿದ್ಯಾರ್ಥಿನಿ ಧರಣಿ ಶೆಟ್ಟಿ ಬಿಎಸ್ಸಿ ಪದವಿಯಲ್ಲಿ 16 ಚಿನ್ನದ ಪದಕ ಗಳಿಸಿದ್ದಾರೆ. ದಿನಸಿ ವ್ಯಾಪಾರಿ ನಾಗೇಂದ್ರ ಶೆಟ್ಟಿ ಮತ್ತು ಸವಿತಾ ಶೆಟ್ಟಿ ಅವರ ಹಿರಿಯ ಪುತ್ರಿಯಾಗಿರುವ ಧರಣಿ ಕೋಲಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆದು, ಎಸ್ಎಸ್ಎಲ್ಸಿಯಲ್ಲಿ ಶೇಕಡ 97, ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇಕಡ 95 ಅಂಕ ಪಡೆದಿದ್ದಾರೆ. ಯುಪಿಎಸ್ಸಿ ಪರೀಕ್ಷೆಗಾಗಿ ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿರುವ ಧರಣಿ ಶನಿವಾರ ನಡೆದ ತೋಟಗಾರಿಕೆ ವಿವಿ ಘಟಕೋತ್ಸವದಲ್ಲಿ 16 ಚಿನ್ನದ ಪದಕ ಪಡೆದು ಸಮಾರಂಭದ ಕೇಂದ್ರ ಬಿಂದುವಾಗಿದ್ದಾರೆ. ಅವರ ಸಾಧನೆಗೆ ಪೋಷಕರು, ಸ್ನೇಹಿತರು ಅಭಿನಂದಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...