alex Certify ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಎಫ್ಐಆರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಎಫ್ಐಆರ್

ಧಾರವಾಡ: ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಆರು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಕರ್ನಾಟಕ ವಾಲ್ಮೀಕಿ ಮಹಾಸಭಾ ಧಾರವಾಡ ಜಿಲ್ಲಾ ಅಧ್ಯಕ್ಷ ಮೋಹನ ಗುಡಿಸಲಮನಿ ಅವರ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಮುಗದ ಗ್ರಾಮದ ಸರ್ವೋದಯ ಶಿಕ್ಷಣ ಸಂಸ್ಥೆಯನ್ನು ಬಸವರಾಜ ಹೊರಟ್ಟಿ ಅವರು ಕೈವಶ ಮಾಡಿಕೊಂಡಿದ್ದಾರೆಂದು ಆರೋಪಿಸಲಾಗಿದೆ.

ಶಿಕ್ಷಣ ಟ್ರಸ್ಟ್, ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳಲು ಬಸವರಾಜ ಹೊರಟ್ಟಿ ಮುಂದಾಗಿದ್ದು, ಇದನ್ನು ಪ್ರಶ್ನಿಸಿದಕ್ಕೆ ಹಲ್ಲೆ ಮಾಡಿಸಿರುವುದಾಗಿ ಆರೋಪಿಸಲಾಗಿದೆ. ಮುಗದ ಗ್ರಾಮದಲ್ಲಿ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ ಜಖಂಗೊಳಿಸಿ ಹಲ್ಲೆ ಮಾಡಿರುವುದಾಗಿ ಆರೋಪಿಸಿ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...