
ಎಪಿ ಅರ್ಜುನ್ ನಿರ್ದೇಶನದ ಈ ಚಿತ್ರದಲ್ಲಿ ಧ್ರುವ ಸರ್ಜಾ ಸೇರಿದಂತೆ ವೈಭವಿ ಶಾಂಡಿಲ್ಯ, ಅನ್ವೇಶಿ ಜೈನ್, ಜಾರ್ಜಿಯಾ ಆಂಡ್ರಿಯಾನಿ, ಚಿಕ್ಕಣ್ಣ, ಮಾಳವಿಕಾ ಅವಿನಾಶ್, ಅಚ್ಯುತ್ ಕುಮಾರ್, ನಿಕಿತಿನ್ ಧೀರ್, ನವಾಬ್ ಷಾ, ರೋಹಿತ್ ಪಾಠಕ್, ನಾಥನ್ ಜೋನ್ಸ್, ತೆರೆ ಹಂಚಿಕೊಂಡಿದ್ದು, ವಾಸವಿ ಎಂಟರ್ಪ್ರೈಸಸ್ ಬ್ಯಾನರ್ ನಲ್ಲಿ ಉದಯ್ ಕೆ ಮೆಹತಾ ಮತ್ತು ಸೂರಜ್ ಉದಯ್ ಮೆಹ್ತಾ ಬಂಡವಾಳ ಹೂಡಿದ್ದಾರೆ. ಮಣಿ ಶರ್ಮ ಸಂಗೀತ ಸಂಯೋಜನೆ ನೀಡಿದ್ದು, ಕೆ ಎಂ ಪ್ರಕಾಶ್ ಸಂಕಲನ, ಗೋಪಿನಾಥ್ ಕೃಷ್ಣಮೂರ್ತಿ ಹಾಗೂ ಎಪಿ ಅರ್ಜುನ್ ಅವರ ಸಂಭಾಷಣೆ, ಇಮ್ರಾನ್ ಸರ್ಧಾರಿಯಾ, ಮತ್ತು ಮುರಳಿ ನೃತ್ಯ ನಿರ್ದೇಶನವಿದೆ.