alex Certify ಡಿ.ಕೆ ಶಿವಕುಮಾರ್ ಗೊಡ್ಡು ಬೆದರಿಕೆಗೆ ಹೆದರಲ್ಲ, ಏನು ಬಿಚ್ಚಿಡ್ತಾರೋ ಬಿಚ್ಚಿಡಲಿ ; H.D ಕುಮಾರಸ್ವಾಮಿ ಸವಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ.ಕೆ ಶಿವಕುಮಾರ್ ಗೊಡ್ಡು ಬೆದರಿಕೆಗೆ ಹೆದರಲ್ಲ, ಏನು ಬಿಚ್ಚಿಡ್ತಾರೋ ಬಿಚ್ಚಿಡಲಿ ; H.D ಕುಮಾರಸ್ವಾಮಿ ಸವಾಲ್

ಬೆಂಗಳೂರು : ಡಿಸಿಎಂ ಡಿ.ಕೆ ಶಿವಕುಮಾರ್ ಗೊಡ್ಡು ಬೆದರಿಕೆಗೆ ಹೆದರಲ್ಲ, ಏನು ಬಿಚ್ಚಿಡ್ತಾರೋ ಬಿಚ್ಚಿಡಲಿ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಪ್ಪು ಮಾಡಿದ್ದು ಅವರು, ನಾವ್ಯಾಕೆ ಹೆದರಬೇಕು..? ಯಾದಗಿರಿಯಲ್ಲಿ ಪಿಎಸ್ ಐ ಪರಶುರಾಮ್ ಪತ್ನಿ ಕಣ್ಣೀರಿಡುತ್ತಿದ್ದಾರೆ, ಮೊದಲು ಆ ಹೆಣ್ಣು ಮಗುವಿಗೆ ಸರ್ಕಾರ ನ್ಯಾಯ ನೀಡಲಿ. ನ್ಯಾಯಕೊಡಿಸಲು ಸರ್ಕಾರಕ್ಕೆ ಆಗುತ್ತಿಲ್ಲ ಎಂದರು.

ಕಳೆದ 3 ದಿನದಿಂದ ಕುಮಾರಸ್ವಾಮಿ ಗುಣಗಾನ ಮಾಡ್ತಿದ್ದಾರೆ, ಜನಾಂದೋಲನದಲ್ಲಿ ರಾಜ್ಯದ ಜನರ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ಕುಮಾರಸ್ವಾಮಿ ಗುಣಗಾನ ಮಾಡ್ತಿದ್ದಾರೆ..! ಇದಕ್ಕೆ ಏನು ಹೇಳೋದು..? ನಾನು ಯಾರ ಗೊಡ್ಡು ಬೆದರಿಕೆಗೂ ಹೆದರಲ್ಲ.. , ಏನು ಬಿಚ್ಚಿಡ್ತಾರೋ ಬಿಚ್ಚಿಡಲಿ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಡಿಕೆಶಿಗೆ ಟಾಂಗ್ ನೀಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...