alex Certify ಚುನಾವಣೆ ಹೊತ್ತಲ್ಲೇ ದೇವರ ಮೊರೆ ಹೋದ ಡಿಕೆಶಿ: ಶೃಂಗೇರಿ, ಧರ್ಮಸ್ಥಳಕ್ಕೆ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಹೊತ್ತಲ್ಲೇ ದೇವರ ಮೊರೆ ಹೋದ ಡಿಕೆಶಿ: ಶೃಂಗೇರಿ, ಧರ್ಮಸ್ಥಳಕ್ಕೆ ಭೇಟಿ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಪ್ರಚಾರ, ಗೆಲುವಿನ ಕಾರ್ಯತಂತ್ರ, ಆಕಾಂಕ್ಷಿಗಳ ಅಸಮಾಧಾನ ಶಮನ ಹೀಗೆ ಹತ್ತು ಹಲವು ಚುನಾವಣೆಯ ಕಾರ್ಯದೊತ್ತಡದ ನಡುವೆ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ದೇವರ ಮೊರೆ ಹೋಗಿದ್ದಾರೆ.

ಚುನಾವಣೆ ಹೊಸ್ತಿಲಲ್ಲಿ ವಿವಿಧ ದೇವಾಲಯಗಳಿಗೆ ಡಿ.ಕೆ. ಶಿವಕುಮಾರ್ ಭೇಟಿ ನೀಡತೊಡಗಿದ್ದಾರೆ. ಆದಿಚುಂಚನಗರಿ, ಕಾಳಹಸ್ತಿ ಬಳಿಕ ಶೃಂಗೇರಿ ಮತ್ತು ಧರ್ಮಸ್ಥಳಕ್ಕೆ ಡಿ.ಕೆ. ಶಿವಕುಮಾರ್ ಭೇಟಿ ನೀಡಲಿದ್ದಾರೆ. ನಾಳೆ ಶೃಂಗೇರಿ ಮತ್ತು ಧರ್ಮಸ್ಥಳಕ್ಕೆ ಅವರು ಭೇಟಿ ನೀಡಲಿದ್ದು, ಶೃಂಗೇರಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದುಕೊಳ್ಳಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...