![](https://kannadadunia.com/wp-content/uploads/2022/09/236101-kse.jpg)
ನವದೆಹಲಿ: ಸಂಸದ ಡಿ.ಕೆ. ಸುರೇಶ್ ಅವರ ದೇಶ ವಿಭಜನೆ ಯೋಚನೆಯೇ ತಪ್ಪು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ದೇಶ ವಿಭಜನೆಗಾಗಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾ? ಹಿಂದೂ ಹಾಗೂ ಮುಸ್ಲಿಂ ದೇಶ ಮಾಡಿ ವಿಭಜನೆ ಮಾಡಿದ್ದರು. ಇದನ್ನು ಮುಂದುವರೆಸುವ ಚಿಂತನೆ ತಪ್ಪು ಎಂದು ಹೇಳಿದ್ದಾರೆ.
ಡಿ.ಕೆ. ಸುರೇಶ್ ಹೇಳಿಕೆ ತಪ್ಪು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಹೇಳಿದ್ದಾರೆ. ದೇಶ ವಿಭಜನೆ ಹೇಳಿಕೆ ತಪ್ಪಾಗಿದೆ ಎಂದಿದ್ದಕ್ಕೆ ನನ್ನ ವಿರುದ್ಧ ಕೇಸ್ ಹಾಕಿದರು ಎಂದು ಈಶ್ವರಪ್ಪ ಹೇಳಿದ್ದಾರೆ.