alex Certify ರಾಜ್ಯದಲ್ಲಿ ‘ಡಿಕೆಶಿ ಬ್ರದರ್ಸ್’ ವಿಧ್ವಂಸಕ ಕೃತ್ಯಕ್ಕೆ ಹೊಂಚು ಹಾಕಿ ಸಿಕ್ಕಿಬಿದ್ದಿದ್ದಾರೆ : ಬಿಜೆಪಿ ವಾಗ್ಧಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ‘ಡಿಕೆಶಿ ಬ್ರದರ್ಸ್’ ವಿಧ್ವಂಸಕ ಕೃತ್ಯಕ್ಕೆ ಹೊಂಚು ಹಾಕಿ ಸಿಕ್ಕಿಬಿದ್ದಿದ್ದಾರೆ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಬೆಂಗಳೂರಿನಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದ್ದು, ಬೆಂಗಳೂರನ್ನೇ ಟಾರ್ಗೆಟ್ ಮಾಡಿದ್ರು ಎಂಬ ಸ್ಪೋಟಕ ಮಾಹಿತಿ ಲಭ್ಯವಾಗಿದೆ.

ಈ ವಿಚಾರ ರಾಜಕೀಯ ಪಕ್ಷಗಳ ವಾಕ್ಸಮರಕ್ಕೂ ಕಾರಣವಾಗಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ಧಾಳಿ ನಡೆಸಿದೆ. ರಾಜ್ಯದಲ್ಲಿ ‘ಡಿಕೆಶಿ ಬ್ರದರ್ಸ್’ ವಿಧ್ವಂಸಕ ಕೃತ್ಯಕ್ಕೆ ಹೊಂಚು ಹಾಕಿ ಸಿಕ್ಕಿಬಿದ್ದಿದ್ದಾರೆ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.

ಬೆಂಗಳೂರಿಗೆ ಬಾಂಬಿಡಲು ಮುಂದಾದವರ ರಕ್ಷಣೆ ರಾಜ್ಯ ಸರಕಾರ ಮಾಡದಿರಲಿ. ಕರ್ನಾಟಕದಲ್ಲಿ ಡಿಕೆಶಿ ಅವರ ‘ಬ್ರದರ್ಸ್’ ವಿಧ್ವಂಸಕ ಕೃತ್ಯ ಎಸೆಗಲು ಹೊಂಚು ಹಾಕಿ ಸಿಕ್ಕಿಬಿದ್ದಿದ್ದಾರೆ. ಸಿದ್ದರಾಮಯ್ಯ
ರವರ ತುಘಲಕ್ ಸರ್ಕಾರದ ಆಗಮನದಿಂದಾಗಿ ಮತಾಂಧ ಜಿಹಾದಿಗಳು ಉಗ್ರರ ಸಖ್ಯ ಬೆಳೆಸಿ ಬಾಲ ಬಿಚ್ಚಿದ್ದಾರೆ. ಕಾಂಗ್ರೆಸ್ ಇನ್ನಾದರೂ ತುಷ್ಟೀಕರಣ ರಾಜಕೀಯ ಬಿಟ್ಟು, ದೇಶದ ಭದ್ರತೆ, ಸುರಕ್ಷತೆಗೆ ಒತ್ತು ನೀಡಲಿ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...