alex Certify ಬಾಣಂತಿಯೊಂದಿಗೆ ವೈದ್ಯನ ಅನುಚಿತ ವರ್ತನೆ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಣಂತಿಯೊಂದಿಗೆ ವೈದ್ಯನ ಅನುಚಿತ ವರ್ತನೆ ಆರೋಪ

ಶಿವಮೊಗ್ಗ: ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿಯೊಂದಿಗೆ ವೈದ್ಯರೊಬ್ಬರು ಅನುಚಿತವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ.

ಶಿವಮೊಗ್ಗ ಜಿಲ್ಲೆ ಸಾಗರದ ತಾಯಿ ಮಗು ಆಸ್ಪತ್ರೆಯ ವೈದ್ಯ ಡಾ. ನಾಗೇಂದ್ರಪ್ಪ ಅವರು ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ನಾಲ್ಕು ತಿಂಗಳ ಬಾಣಂತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹ ಸಂಚಾಲಕ ಕೆ.ಹೆಚ್ ಸುಧೀಂದ್ರ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೈದ್ಯರು ಬಾಣಂತಿಗೆ ಕಪಾಳಮೋಕ್ಷ ಮಾಡಿದ್ದು, ಈ ವಿಷಯ ಬಹಿರಂಗವಾದ ನಂತರ ಮಹಿಳೆಯ ಸಂಬಂಧಿಕರು, ಸಾಮಾಜಿಕ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಆದ ಘಟನೆಗೆ ವೈದ್ಯರು ಕ್ಷಮೆ ಕೇಳುವ ಸೌಜನ್ಯ ತೋರಿಸಿಲ್ಲ. ಅವರ ವಿರುದ್ಧ ಪೊಲೀಸ್ ದೂರು ದಾಖಲಿಸಿದರೂ ಕ್ರಮ ಕೈಗೊಳ್ಳುತ್ತಿಲ್ಲ ಆರೋಪಿಸಿದ್ದಾರೆ.

ತಾಲೂಕು ಆಡಳಿತ ಬಾಣಂತಿಗೆ ಕಪಾಳಮೋಕ್ಷ ಮಾಡಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...