alex Certify ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ; ವೈದ್ಯ ಮತ್ತವರ ಮಕ್ಕಳ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ; ವೈದ್ಯ ಮತ್ತವರ ಮಕ್ಕಳ ಸಾವು

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿದ ಪರಿಣಾಮ ವೈದ್ಯ ಮತ್ತವರ ಇಬ್ಬರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ತಿರುಪತಿಯ ರೇಣುಗುಂಟಾದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ಅಡುಗೆ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಾಗಿ ಈ ಬೆಂಕಿ ಮೂರು ಅಂತಸ್ತಿನ ಇಡೀ ಮನೆಯನ್ನು ವ್ಯಾಪಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದರಿಂದಾಗಿ ರೇಡಿಯೋಲಜಿ ತಜ್ಞ ಡಾ. ರವಿಶಂಕರ್‌ ರೆಡ್ಡಿ ಮತ್ತವರ 11 ವರ್ಷ ವಯಸ್ಸಿನ ಮಗಳು ಹಾಗೂ 7 ವರ್ಷದ ಮಗ ಮೃತಪಟ್ಟಿದ್ದಾರೆ. ವೈದ್ಯರ ಪತ್ನಿ ಹಾಗೂ ಅತ್ತೆ ಈ ದುರಂತದಲ್ಲಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...