ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿದ ಪರಿಣಾಮ ವೈದ್ಯ ಮತ್ತವರ ಇಬ್ಬರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ತಿರುಪತಿಯ ರೇಣುಗುಂಟಾದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ಅಡುಗೆ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಾಗಿ ಈ ಬೆಂಕಿ ಮೂರು ಅಂತಸ್ತಿನ ಇಡೀ ಮನೆಯನ್ನು ವ್ಯಾಪಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದರಿಂದಾಗಿ ರೇಡಿಯೋಲಜಿ ತಜ್ಞ ಡಾ. ರವಿಶಂಕರ್ ರೆಡ್ಡಿ ಮತ್ತವರ 11 ವರ್ಷ ವಯಸ್ಸಿನ ಮಗಳು ಹಾಗೂ 7 ವರ್ಷದ ಮಗ ಮೃತಪಟ್ಟಿದ್ದಾರೆ. ವೈದ್ಯರ ಪತ್ನಿ ಹಾಗೂ ಅತ್ತೆ ಈ ದುರಂತದಲ್ಲಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.