alex Certify ವರದಕ್ಷಿಣೆ ಕಿರುಕುಳ: ರೈಲಿಗೆ ತಲೆಕೊಟ್ಟು ಮಹಿಳೆ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರದಕ್ಷಿಣೆ ಕಿರುಕುಳ: ರೈಲಿಗೆ ತಲೆಕೊಟ್ಟು ಮಹಿಳೆ ಆತ್ಮಹತ್ಯೆ

ಬೆಂಗಳೂರು: ವರದಕ್ಷಿಣೆ ಕಿರುಕುಳದಿಂದ ಮನನೊಂದು ರೈಲಿಗೆ ತಲೆ ಕೊಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ವಾದಕುಂಟೆ ಬಳಿ ಘಟನೆ ನಡೆದಿದೆ. ಲಕ್ಕಪ್ಪನಹಳ್ಳಿ ನಿವಾಸಿ ಭವ್ಯಾ(27) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.

ತಿರುಮಲೇಗೌಡನಪಾಳ್ಯದ ಕಿರಣ್ ಜೊತೆ ಭವ್ಯಾ ಮದುವೆಯಾಗಿತ್ತು. ವರದಕ್ಷಿಣೆ ತರಲಿಲ್ಲವೆಂದು ಪದೇಪದೇ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದೆ. ಪತಿ ಕಿರಣ್, ಅತ್ತೆ ಭಾಗ್ಯಮ್ಮ, ಅಕ್ಕ ಲಾವಣ್ಯ, ತಂಗಿ ಭವ್ಯಾ ಅವರು ಕಿರುಕುಳ ನೀಡುತ್ತಿದ್ದರು. ಪತಿ ಕುಟುಂಬದ ಕಿರುಕುಳ ತಾಳಲಾರದೆ ಭವ್ಯಾ ತವರು ಮನೆ ಸೇರಿಕೊಂಡಿದ್ದರು. ಇದರಿಂದ ನೊಂದು ರೈಲಿಗೆ ತಲೆ ಕೊಟ್ಟು ಭವ್ಯಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಯಶವಂತಪುರ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...