alex Certify BREAKING: ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕರಾಗಿ ಡಾ. ಸಿ.ಎನ್. ಮಂಜುನಾಥ್ ಸೇವಾವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕರಾಗಿ ಡಾ. ಸಿ.ಎನ್. ಮಂಜುನಾಥ್ ಸೇವಾವಧಿ ವಿಸ್ತರಣೆ

ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ.

ಸರ್ಕಾರ ಮಂಜುನಾಥ್ ಅವರ ಸೇವಾ ಅವಧಿಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಿದೆ. ಜುಲೈ 19 ಕ್ಕೆ ಮಂಜುನಾಥ್ ಅವರ ಸೇವಾವಧಿ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಒಂದು ವರ್ಷದ ಅವಧಿಗೆ ಅವರನ್ನು ಮುಂದುವರೆಸಲಾಗಿದೆ.

ಮಂಜುನಾಥ್ ಅವರನ್ನೇ ಮುಂದುವರಿಸಬೇಕೆಂದು ಆಸ್ಪತ್ರೆಯ ಸಿಬ್ಬಂದಿ, ಗಣ್ಯರು ಮತ್ತು ಸಾರ್ವಜನಿಕರಿಂದ ಒತ್ತಾಯ ಕೇಳಿ ಬಂದಿತ್ತು. ಜಯದೇವ ಆಸ್ಪತ್ರೆಯ ಏಳಿಗೆಗಾಗಿ ಮಂಜುನಾಥ್ ಅವರು ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಅವರನ್ನೇ ಮುಂದುವರಿಸಬೇಕೆಂದು ಹೇಳಲಾಗಿತ್ತು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರು, ಸಿಬ್ಬಂದಿ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇವೆಲ್ಲಾ ಕಾರಣಗಳಿಂದ ಮಂಜುನಾಥ್ ಅವರ ಸೇವಾವಧಿ ವಿಸ್ತರಿಸಲಾಗಿದೆ.

ಮಂಜುನಾಥ್ ಅವರ ಸೇವೆ ಪರಿಗಣಿಸಿ ಸರ್ಕಾರ ಅವರ ಸೇವಾವಧಿ ವಿಸ್ತರಿಸಿ ಆದೇಶ ಹೊರಡಿಸಿದ್ದು, ಖುದ್ದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ಮಾಡಿ ಸೇವಾ ಅವಧಿ ವಿಸ್ತರಿಸಿದ ಬಗ್ಗೆ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...