alex Certify BIG NEWS: ಪ್ರಚೋದನಕಾರಿ ಭಾಷಣ ಮಾಡುವ ಮಹಾರಾಷ್ಟ್ರ ನಾಯಕರಿಗೆ ಎಚ್ಚರಿಕೆ ನೀಡಿದ ಗೃಹ ಸಚಿವರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಚೋದನಕಾರಿ ಭಾಷಣ ಮಾಡುವ ಮಹಾರಾಷ್ಟ್ರ ನಾಯಕರಿಗೆ ಎಚ್ಚರಿಕೆ ನೀಡಿದ ಗೃಹ ಸಚಿವರು

ಬೆಂಗಳೂರು: ಕನ್ನಡ ರಾಜ್ಯೋತ್ಸವ ದಿನದಂದು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪುಂಡಾಟ ಮೆರೆಯುವ ಶಿವಸೇನೆ ಹಾಗೂ ಎಂಇಎಸ್ ನಾಯಕರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಪರಮೇಶ್ವರ್, ಪ್ರತಿ ವರ್ಷ ಕನ್ನಡ ರಾಜ್ಯೋತ್ಸವದಂದು ಎಂಇಎಸ್ ನವರು ಬೆಳಗಾವಿಗೆ ಬಂದು ಕರಾಳ ದಿನಾಚರಣೆ ನಡೆಸುತ್ತಾರೆ. ಇಂತಹ ಕೃತ್ಯವೆಸಗುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯೋತ್ಸವದಂದು ಬೆಳಗಾವಿಗೆ ಬಂದು ಪ್ರಚೋದನಕಾರಿ ಭಾಷಣ ಮಾಡುವ ಮಹಾರಾಷ್ಟ್ರ ನಾಯಕರು, ಶಿವಸೇನೆ, ಎಂಇಎಸ್ ನ ಯಾವುದೇ ನಾಯಕರಿರಲಿ, ಅವರ ಸ್ಥಾನಮಾನ ಏನೇ ಆಗಿರಲಿ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...