alex Certify SHOCKING: ಚರಂಡಿ ಸ್ವಚ್ಛಗೊಳಿಸುವಾಗ ದುರಂತ, ಉಸಿರುಗಟ್ಟಿ ಇಬ್ಬರ ದಾರುಣ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಚರಂಡಿ ಸ್ವಚ್ಛಗೊಳಿಸುವಾಗ ದುರಂತ, ಉಸಿರುಗಟ್ಟಿ ಇಬ್ಬರ ದಾರುಣ ಸಾವು

ಕಲಬುರಗಿ: ಒಳಚರಂಡಿ ಸ್ವಚ್ಛಗೊಳಿಸಲು ಇಳಿದ ಇಬ್ಬರು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.

ಕಲಬುರ್ಗಿಯ ಕೈಲಾಶ್ ನಗರದಲ್ಲಿ ಘಟನೆ ನಡೆದಿದ್ದು, ಜಲಮಂಡಳಿ ನಿರ್ಲಕ್ಷಕ್ಕೆ ಇಬ್ಬರು ಗುತ್ತಿಗೆ ಕಾರ್ಮಿಕರು ಬಲಿಯಾಗಿದ್ದಾರೆ. ಲಾಲ್ ಅಹಮ್ಮದ್(25), ರಷೀದ್(30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆನ್ನಲಾಗಿದೆ.

ಒಳಚರಂಡಿ ಕಟ್ಟಿಕೊಂಡಿದ್ದರಿಂದ ಸ್ವಚ್ಛಗೊಳಿಸಲು ಇವರು ಇಳಿದಿದ್ದರು. 18 ಅಡಿ ಆಳದಲ್ಲಿ ಇಳಿದು ಕೆಲಸ ಮಾಡುತ್ತಿದ್ದಾಗ ಉಸಿರುಗಟ್ಟಿ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...