alex Certify ಅನಿಲ ಸೋರಿಕೆಯಿಂದ ಮೂವರ ಸಾವು, ಹಲವು ಕಾರ್ಮಿಕರು ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನಿಲ ಸೋರಿಕೆಯಿಂದ ಮೂವರ ಸಾವು, ಹಲವು ಕಾರ್ಮಿಕರು ಅಸ್ವಸ್ಥ

ಪಶ್ಚಿಮ ಬಂಗಾಳದ ದುರ್ಗಾಪುರ ಸ್ಟೀಲ್ ಪ್ಲಾಂಟ್‌ ನಲ್ಲಿ ಅನಿಲ ಸೋರಿಕೆಯಿಂದ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಹಲವಾರು ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ.

ಸಾವನ್ನಪ್ಪಿದ ಮೂವರು ಕಾರ್ಮಿಕರು ಉಕ್ಕಿನ ಕಾರ್ಖಾನೆಯ ನಿರ್ವಾತ ಆಮ್ಲಜನಕ ಘಟಕದೊಳಗೆ ಸಿಲುಕಿಕೊಂಡರು. ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಉಳಿಸಲು ಸಾಧ್ಯವಾಗಲಿಲ್ಲ. ಸ್ಥಾವರದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯ ಮುಂದುವರಿದಿದೆ.

ನವೆಂಬರ್ 2017 ರಲ್ಲಿ, ದುರ್ಗಾಪುರ ಸ್ಟೀಲ್ ಪ್ಲಾಂಟ್‌ನ ಇಬ್ಬರು ಗುತ್ತಿಗೆ ಕಾರ್ಮಿಕರು ಸಾವನ್ನಪ್ಪಿದರು 2010ರಲ್ಲಿ ಸ್ಥಾವರದಲ್ಲಿ ಮೀಥೇನ್ ಸೋರಿಕೆಯಿಂದಾಗಿ 27 ಕಾರ್ಮಿಕರು ಅಸ್ವಸ್ಥರಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...