alex Certify ಪಡಿತರ ಚೀಟಿದಾರರಿಗೆ ಮುಖ್ಯಮಾಹಿತಿ: ಇ –ಕೆವೈಸಿ ಕಡ್ಡಾಯ, ನಾಳೆಯೇ ಕೊನೆ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಮುಖ್ಯಮಾಹಿತಿ: ಇ –ಕೆವೈಸಿ ಕಡ್ಡಾಯ, ನಾಳೆಯೇ ಕೊನೆ ದಿನ

ರಾಯಚೂರು: ಜಿಲ್ಲೆಯಲ್ಲಿ ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಜ.1 ರಿಂದ 10 ರವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸುವಂತೆ ಜಿಲ್ಲಾಧಿಕಾರಿ ಡಾ. ಅವಿನಾಶ್‌ ರಾಜೇಂದ್ರ ಮೆನನ್‌ ಅವರು ಕೋರಿದ್ದಾರೆ.

ಇ-ಕೆವೈಸಿ ಮಾಡುವ ಸಮಯದಲ್ಲಿ ಎಸ್.ಸಿ ಅಥವಾ ಎಸ್.ಟಿ ಆಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಸಂಖ್ಯೆಯನ್ನು ನಮೂದಿಸಬೇಕು.ಅಲ್ಲದೆ ಅನಿಲ ಸಂಪರ್ಕ ಹೊಂದಿದ್ದಲ್ಲಿ ಗ್ರಾಹಕರ ಸಂಖ್ಯೆಯನ್ನು ನಮೂದಿಸಿ, ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವಂತೆ ಅವರು ತಿಳಿಸಿದ್ದಾರೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು ಯಾವುದೇ ಹಣ ನೀಡುವಂತಿಲ್ಲ. ಯಾವುದಾದರೂ ದೂರುಗಳಿದ್ದಲ್ಲಿ ಸಹಾಯವಾಣಿ ಸಂ:1967 ಗೆ ಸಂಪರ್ಕಿಸುವಂತೆ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...