alex Certify ವೃದ್ಧೆ ಕೊಲೆಗೈದು ಚಿನ್ನಾಭರಣ ದೋಚಿದ ದುಷ್ಕರ್ಮಿಗಳು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೃದ್ಧೆ ಕೊಲೆಗೈದು ಚಿನ್ನಾಭರಣ ದೋಚಿದ ದುಷ್ಕರ್ಮಿಗಳು..!

ಮನೆಗೆ ನುಗ್ಗಿದ ದುಷ್ಕರ್ಮಿಗಳು 68 ವರ್ಷದ ವೃದ್ಧೆ ಮೇಲೆ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ. ಮಾತ್ರವಲ್ಲದೇ ಅವರ ಇಬ್ಬರು ಮಕ್ಕಳು ಹಾಗೂ ಸೊಸೆಯ ಮೇಲೂ ದಾಳಿ ನಡೆಸಿದ ಘಟನೆ ಉತ್ತರ ಪ್ರದೇಶದ ಮುಜಿಬ್​ಪುರ ಗ್ರಾಮದಲ್ಲಿ ನಡೆದಿದೆ.

ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮೂವರು ಅಪರಿಚಿತ ವ್ಯಕ್ತಿಗಳು ಮನೆಗೆ ನುಗ್ಗಿದ್ದಾರೆ ಮಾತ್ರವಲ್ಲದೇ ದೊಣ್ಣೆಯಿಂದ ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ. ಇದಾದ ಬಳಿಕ ಮನೆಯಲ್ಲಿದ್ದ ನಗದು ಹಾಗೂ ಆಭರಣಗಳ ಸಮೇತ ಪರಾರಿಯಾಗಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ಘಟನೆಯನ್ನು ಗಾಯಗೊಂಡವರನ್ನು ಶಿವಪ್ರಸಾದ್​ ಅವರ ಪತ್ನಿ ಅಂಜು, ಶಿವಪ್ರಸಾದ್​ ಸಹೋದರ ಚೋಟೆಲಾಲ್​ ಹಾಗೂ ಅವರ ತಾಯಿ ಚಂದ್ರವತಿ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ಸಾಗಿಸಿದ ವೇಳೆ ಚಂದ್ರಾವತಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...