alex Certify ಪಾರಿವಾಳ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ಬಾಲಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾರಿವಾಳ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ಬಾಲಕ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ಹನುಮಾಪುರ ಗ್ರಾಮದಲ್ಲಿ ಪಾರಿವಾಳ ರಕ್ಷಿಸಲು ಹೋಗಿ ಬಾಲಕನೊಬ್ಬ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ.

ರಾಮಚಂದ್ರ(12) ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಪಾರಿವಾಳವೊಂದು ವಿದ್ಯುತ್ ತಂತಿಗೆ ಸಿಲುಕಿ ಒದ್ದಾಡುವುದನ್ನು ಗಮನಿಸಿದ ರಾಮಚಂದ್ರ ಪಾರಿವಾಳ ರಕ್ಷಿಸಲು ಮುಂದಾಗಿದ್ದಾನೆ. ವಿದ್ಯುತ್ ಕಂಬ ಹತ್ತಿ ಪಾರಿವಾಳ ರಕ್ಷಿಸುವ ವೇಳೆ ವಿದ್ಯುತ್ ಪ್ರವಹಿಸಿ ಕಂಬದಲ್ಲಿಯೇ ಸಾವನ್ನಪ್ಪಿದ್ದಾನೆ.

6ನೇ ತರಗತಿ ಓದುತ್ತಿದ್ದ ಬಾಲಕ ರಾಮಚಂದ್ರನ ಸಾವಿನಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಪಾರಿವಾಳ ಉಳಿಸಲು ಹೋಗಿ ಪ್ರಾಣ ಕಳೆದುಕೊಂಡ ರಾಮಚಂದ್ರನ ಸಾವಿಗೆ ಗ್ರಾಮದ ಜನ ಮರುಗಿದ್ದಾರೆ. ಸ್ಥಳಕ್ಕೆ ರಾಮಪುರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...