alex Certify BIG NEWS: ವಿದ್ಯುತ್ ಶಾಕ್ ಗೆ ನೆನಪಿನ ಶಕ್ತಿಯನ್ನೇ ಕಳೆದುಕೊಂಡ ಬಾಲಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯುತ್ ಶಾಕ್ ಗೆ ನೆನಪಿನ ಶಕ್ತಿಯನ್ನೇ ಕಳೆದುಕೊಂಡ ಬಾಲಕ

ರಾಯಚೂರು: ವಿದ್ಯುತ್‍ ಸ್ಪರ್ಶಿಸಿ ತಂದೆ, ಮಗ ದುರ್ಮರಣ- Kannada Prabha

ಕೊಪ್ಪಳ: ಕರೆಂಟ್ ಶಾಕ್ ನಿಂದ ಬಾಲಕನೊಬ್ಬ ನೆನಪಿನ ಶಕ್ತಿಯನ್ನೇ ಕಳೆದುಕೊಂಡಿರುವ ಘೋರ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮದಲ್ಲಿ ನಡೆದಿದೆ.

10 ವರ್ಷದ ಬಾಲಕ ವಿರೇಶ್ ಜ್ಞಾಪಕ ಶಕ್ತಿಯನ್ನೇ ಕಳೆದುಕೊಂಡಿದ್ದಾನೆ. ಮೈಲಾಪುರ ಗ್ರಾಮದ ಆಟದ ಮೈದಾನದಲ್ಲಿ ಅಕ್ರಮವಾಗಿ ವಿದ್ಯುತ್ ಬಳಸಿ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಮೈದಾನದ ತುಂಬೆಲ್ಲ ವಿದ್ಯುತ್ ವೈರ್ ಗಳನ್ನು ಬೇಕಾಬಿಟ್ಟಿಯಾಗಿ ಎಳೆಯಲಾಗಿತ್ತು. ಮೈದಾನದಲ್ಲಿ ಆಟವಾಡುತ್ತಿದ್ದ ಬಾಲಕ ಅಕಸ್ಮಾತ್ ಆಗಿ ವೈರ್ ಮುಟ್ಟಿದ್ದಾನೆ. ವಿದ್ಯುತ್ ಪ್ರವಹಿಸಿ ಕೈಗೆ ಗಂಭೀರವಾಗಿ ಗಾಯಗಳಾಗಿವೆ.

ಅಲ್ಲದೆ ಬಾಲಕ ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದಾನೆ. ಬಾಲಕನನ್ನು ಕೊಪ್ಪಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಗುತ್ತಿಗೆದಾರ ಮಹದೇವಪ್ಪ ವಿರುದ್ಧ ಬಾಲಕನ ಕುಟುಂಬ ಹಾಗೂ ಗ್ರಾಮಸ್ಥರು ಕಾರಟಗಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...