alex Certify ಮೂವರ ಬಲಿ, ಶಾಸಕರ ಮೇಲೆ ಹಲ್ಲೆ ಬೆನ್ನಲ್ಲೇ 3 ಕಾಡಾನೆಗಳ ಸೆರೆಗೆ ಸರ್ಕಾರದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂವರ ಬಲಿ, ಶಾಸಕರ ಮೇಲೆ ಹಲ್ಲೆ ಬೆನ್ನಲ್ಲೇ 3 ಕಾಡಾನೆಗಳ ಸೆರೆಗೆ ಸರ್ಕಾರದ ಆದೇಶ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಸತತವಾಗಿ ಜನರು ಬಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಮೂರು ಕಾಡಾನೆಗಳ ಸೆರೆಗೆ ಸರ್ಕಾರ ಆದೇಶ ಹೊರಡಿಸಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುಂದೂರಿನಲ್ಲಿ ನಿನ್ನೆ ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟು, ಶಾಸಕ ಎಂ.ಪಿ. ಕುಮಾರಸ್ವಾಮಿ ಮೇಲೆ ಆಕ್ರೋಶ ವ್ಯಕ್ತಪಡಿಸಿ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಮೂರು ಕಾಡಾನೆಗಳ ಸೆರೆಗೆ ಸರ್ಕಾರ ಆದೇಶ ಹೊರಡಿಸಿದೆ.

ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆ ದಾಳಿಗೆ ಮೂರು ತಿಂಗಳಲ್ಲಿ ಮೂವರು ಬಲಿಯಾಗಿದ್ದಾರೆ. ಕಾಡಾನೆ ಸೆರೆ ಹಿಡಿಯದ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...