alex Certify ಕೊಲೆ ಮಾಡಿ, ಮೃತ ದೇಹವನ್ನು ಸಣ್ಣ ತುಂಡುಗಳಾಗಿ ಕತ್ತರಿಸಿದ ಕ್ರೂರಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಲೆ ಮಾಡಿ, ಮೃತ ದೇಹವನ್ನು ಸಣ್ಣ ತುಂಡುಗಳಾಗಿ ಕತ್ತರಿಸಿದ ಕ್ರೂರಿಗಳು

ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ಆಘಾತಕಾರಿ ಘಟನೆ ನಡೆದಿದೆ. 11 ವರ್ಷ ಹುಡುಗನ ಮೃತ ದೇಹ ಚರಂಡಿಯಲ್ಲಿ ಸಿಕ್ಕಿದೆ. ಬಾಲಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.

ತಂತ್ರ-ಮಂತ್ರದ ಹೆಸರಿನಲ್ಲಿ ಬಾಲಕನ ಹತ್ಯೆ ನಡೆದಿದೆ ಎನ್ನಲಾಗ್ತಿದೆ. ಪೊಲೀಸರು ಶವದ ತುಣುಕುಗಳನ್ನು ಸಂಗ್ರಹಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಭಾರುವಾ ಸುಮೇರ್‌ಪುರ ಪೊಲೀಸ್ ಠಾಣೆಯ ಕಾನ್ಶಿರಾಮ್ ಕಾಲೋನಿಯಲ್ಲಿ ನಡೆದಿದೆ. 11 ವರ್ಷದ ಸುಬ್ಬಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಗನ ಮೃತದೇಹ ನೋಡಿ ಪಾಲಕರು ಆಘಾತಕ್ಕೊಳಗಾಗಿದ್ದಾರೆ.

ಆಗಸ್ಟ್ 30 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಸುಬ್ಬಿ ನಾಪತ್ತೆಯಾಗಿದ್ದ. ಆಗಸ್ಟ್ 31 ರಂದು ಕಮರುದ್ದೀನ್, ಮಗ ನಾಪತ್ತೆಯಾಗಿದ್ದಾನೆಂದು ದೂರು ನೀಡಿದ್ದ. ದೂರು ದಾಖಲಿಸಿಕೊಂಡ ಪೊಲೀಸರು ಪತ್ತೆ ಕಾರ್ಯ ಶುರು ಮಾಡಿದ್ದರು. ಇಬ್ಬರ ಮೇಲೆ ಸಂಶಯ ವ್ಯಕ್ತಪಡಿಸಿದ ಪೊಲೀಸರು, ಬಂಧಿಸಿ ವಿಚಾರಣೆ ಶುರು ಮಾಡಿದ್ದಾರೆ. ಬಾಲಕನ ದೇಹದ ಮೇಲೆ ಯಾವುದೇ ಬಟ್ಟೆ ಇರಲಿಲ್ಲ. ಕೈಗಳು, ಕಾಲುಗಳು ಮತ್ತು ತಲೆಯನ್ನು ಕತ್ತರಿಸಲಾಗಿದೆ. ನಾಯಿಗಳು ಮಾಂಸವನ್ನು ತಿನ್ನುತ್ತಿದ್ದವು ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kaip išsaugoti miltelius ir palaikyti švarią aplinką: kodėl verta Top 10 maisto produktų, kurie padeda Kenksmingos plaukų dažų sudėties pagrindinė 6 paprasti būdai, kaip išspręsti užsikimšusį klozetą per Kaip tinkamai dozuoti druską: patarimai dėl druskos kiekio ir Pagrindiniai žiedinių kopūstų privalumai: neįtikėtinos naudos