alex Certify ವೇತನ ವಿಳಂಬ ಹಿನ್ನೆಲೆ ಸಾಲ ಮರುಪಾವತಿ, ವಿಮೆಗೆ ಬಡ್ಡಿ ವಿಧಿಸದಿರಲು ನೌಕರರ ಸಂಘ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇತನ ವಿಳಂಬ ಹಿನ್ನೆಲೆ ಸಾಲ ಮರುಪಾವತಿ, ವಿಮೆಗೆ ಬಡ್ಡಿ ವಿಧಿಸದಿರಲು ನೌಕರರ ಸಂಘ ಮನವಿ

ಬೆಂಗಳೂರು: ಸರ್ಕಾರಿ ನೌಕರರ ವೇತನ ವಿಳಂಬದ ಸಂದರ್ಭದಲ್ಲಿ ಕೆಜಿಐಡಿ ವಿಮೆ, ಸಾಲ ಮರುಪಾವತಿಗೆ ವಿಧಿಸುತ್ತಿರುವ ಬಡ್ಡಿ ಕೈ ಬಿಡಬೇಕೆಂದು ಹಣಕಾಸು ಇಲಾಖೆಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ.

ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಈ ಕುರಿತಾಗಿ ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ವೇತನ ಪಾವತಿ ಅಧಿಕಾರಿ ವರ್ಗಾವಣೆ, ಡಿಜಿಟಲ್ ಸಹಿ ಬದಲಾವಣೆ, ಕೆ-2ಟು ಹಾಗೂ ಹೆಚ್.ಆರ್.ಎಂ.ಎಸ್. ತಂತ್ರಾಂಶದಲ್ಲಿನ ತಾಂತ್ರಿಕ ದೋಷ, ಅನುದಾನದ ಕೊರತೆ, ಅನುದಾನ ಬಿಡುಗಡೆ ವಿಳಂಬದಂತಹ ಸಂದರ್ಭದಲ್ಲಿ ಎರಡು ಮೂರು ತಿಂಗಳಿಗೊಮ್ಮೆ ವೇತನ ದೊರೆಯುತ್ತದೆ. ಇಂತಹ ಸಮಯದಲ್ಲಿ ಕೆಜಿಐಡಿ ಕಂತು, ಸಾಲದ ಮೇಲೆ ಬಡ್ಡಿ ವಿಧಿಸಲಾಗುತ್ತದೆ. ಮಾಡದೆ ಇರುವ ತಪ್ಪುಗಳಿಂದಾಗಿ ನೌಕರರಿಗೆ ತೊಂದರೆಯಾಗುತ್ತದೆ. ಹೀಗಾಗಿ ಬಡ್ಡಿ ವಿಧಿಸಿದಂತೆ ತಡೆಯಲು ತಂತ್ರಾಂಶಗಳಲ್ಲಿ ಮಾರ್ಪಾಡು ಮಾಡಬೇಕೆಂದು ಷಡಾಕ್ಷರಿ ಮನವಿ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se