alex Certify ಪೊಲೀಸ್ ಕಂಪ್ಲೇಂಟ್ ಕೊಡ್ತಿದ್ದಂತೆ ಬಯಲಾಯ್ತು ರಹಸ್ಯ; ಸಂಬಂಧಿಯಿಂದಲೇ ಇಂಜಿನಿಯರಿಂಗ್ ವಿದ್ಯಾರ್ಥಿನಿ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಕಂಪ್ಲೇಂಟ್ ಕೊಡ್ತಿದ್ದಂತೆ ಬಯಲಾಯ್ತು ರಹಸ್ಯ; ಸಂಬಂಧಿಯಿಂದಲೇ ಇಂಜಿನಿಯರಿಂಗ್ ವಿದ್ಯಾರ್ಥಿನಿ ಕೊಲೆ

ಹೈದರಾಬಾದ್: ಇಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಕೊಲೆ ಮಾಡಿ ಸಂಪ್ ನೊಳಗೆ ಮೃತದೇಹ ಹಾಕಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.

19 ವರ್ಷದ ಮಂಜುಳಾ ಮೃತಪಟ್ಟ ಯುವತಿ ಎಂದು ಹೇಳಲಾಗಿದೆ. ಮೂಸಾಸಪೇಟೆ ನಿವಾಸಿಯಾಗಿರುವ ಮಂಜುಳಾ ಸಂಬಂಧಿ ಯುವಕ ಭೂಪತಿಯಿಂದಲೇ ಕೊಲೆಯಾಗಿದ್ದಾಳೆ. ಮಾತನಾಡಬೇಕಿದೆ ಎಂದು ಯುವತಿಯನ್ನು ಕುಕಟಪಲ್ಲಿಯ ಮನೆಗೆ ಕರೆಸಿಕೊಂಡಿದ್ದ ಭೂಪತಿ ಉಸಿರುಗಟ್ಟಿಸಿ ಕೊಲೆ ಮಾಡಿ ಸಂಪ್ ನೊಳಗೆ ಮೃತದೇಹ ಎಸೆದು ಪರಾರಿಯಾಗಿದ್ದಾನೆ.

ಶನಿವಾರದಿಂದ ನಾಪತ್ತೆಯಾಗಿದ್ದ ಮಂಜುಳಾಗಾಗಿ ಹುಡುಕಾಟ ನಡೆಸಿದ ಮನೆಯವರು ಪೋಲೀಸರಿಗೆ ದೂರು ನೀಡಿದ್ದಾರೆ. ಆ ನಂತರದಲ್ಲಿ ಪೊಲೀಸ್ ಠಾಣೆಗೆ ಶರಣಾದ ಭೂಪತಿ ತಾನೇ ಕೊಲೆ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ. ಸಂಬಂಧಿಯಾಗಿದ್ದ ಮಂಜುಳಾಳನ್ನು ಮದುವೆ ಮಾಡಿಕೊಡುವುದಾಗಿ ಚಿಕ್ಕಂದಿನಿಂದಲೇ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಇತ್ತೀಚೆಗೆ ಆಕೆ ನನ್ನನ್ನು ಕಡೆಗಣಿಸಿ ಬೇರೆ ಯುವಕನೊಂದಿಗೆ ಸಂಬಂಧ ಬೆಳೆಸಿದ್ದಳು. ಆತನೊಂದಿಗೆ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಇದನ್ನು ಗಮನಿಸಿ ಕೋಪದಿಂದ ಕೊಲೆ ಮಾಡಿರುವುದಾಗಿ ಭೂಪತಿ ಹೇಳಿದ್ದಾನೆ ಎಂದು ಪೊಲೀಸ್ ಠಾಣಾಧಿಕಾರಿ ನರಸಿಂಗರಾವ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...