alex Certify BIG NEWS: ಅರಣ್ಯ, ಕಂದಾಯ, ಖಾಸಗಿ ಭೂಮಿ ಗುರುತಿಸಲು ಜಂಟಿ ಸರ್ವೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅರಣ್ಯ, ಕಂದಾಯ, ಖಾಸಗಿ ಭೂಮಿ ಗುರುತಿಸಲು ಜಂಟಿ ಸರ್ವೆ

ಬೆಂಗಳೂರು: ರಾಜ್ಯದಲ್ಲಿ ಡೀಮ್ಡ್ ಅರಣ್ಯಕ್ಕೆ ಸಂಬಂಧಿಸಿದಂತೆ ಅರಣ್ಯ ಹಾಗೂ ಕಂದಾಯ ಇಲಾಖೆಯ ಭೂಮಿ ಗುರುತಿಸಲು ಜಂಟಿ ಸರ್ವೆ ಮೂರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಡೀಮ್ಡ್ ಅರಣ್ಯ ಪ್ರದೇಶ ಗುರುತಿಸಲು ಅರಣ್ಯ ಹಾಗೂ ಕಂದಾಯ ಇಲಾಖೆ ಭೂಮಿ ಜೊತೆಗೆ ಖಾಸಗಿ ಭೂಮಿ ವಿಂಗಡಣೆಗಾಗಿ ಜಂಟಿ ಸರ್ವೆ ನಡೆಸಲಾಗುವುದು. ಸರ್ವೆಯರ್ ಕೊರತೆಯಿಂದಾಗಿ ವಿಳಂಬವಾಗಿದ್ದು, ಕಂದಾಯ ಸಚಿವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಅರಣ್ಯ ಹಾಗೂ ಕಂದಾಯ ಭೂಮಿ ಗುರುತಿಸಲು ಜಂಟಿ ಸರ್ವೆ ಕಾರ್ಯ ಕೈಗೊಳ್ಳಲು ಆರು ತಿಂಗಳ ಕಾಲಾವಕಾಶ ನೀಡುವಂತೆ ಅಧಿಕಾರಿಗಳು ಕೇಳಿದ್ದಾರೆ. ಮೂರು ತಿಂಗಳಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...