alex Certify ‘ವರ್ಷಗಳೇ ಕಳೆದರೂ ಆರದ ದೀಪ, ಬಾಡದ ಹೂವು’ : ‘ಹಾಸನಾಂಬೆ ದೇವಿ’ ಪವಾಡ ಕಂಡು ಪಾವನರಾದ ಭಕ್ತರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವರ್ಷಗಳೇ ಕಳೆದರೂ ಆರದ ದೀಪ, ಬಾಡದ ಹೂವು’ : ‘ಹಾಸನಾಂಬೆ ದೇವಿ’ ಪವಾಡ ಕಂಡು ಪಾವನರಾದ ಭಕ್ತರು

ಹಾಸನ : ಐತಿಹಾಸಿಕ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ನಿನ್ನೆಯಿಂದ ಓಪನ್ ಆಗಿದ್ದು, ಇಂದು ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದರು.

ಆಶ್ವೀಜ ಮಾಸದ ಮೊದಲ ಗುರುವಾರ (ನಿನ್ನೆ) ಅರಸು ವಂಶಸ್ಥ ನಂಜರಾಜೇ ಅರಸ್ ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಾಗಿದೆ.ವರ್ಷದ ಹಿಂದೆ ಹಚ್ಚಿಟ್ಟದ್ದ ದೀಪ ಇನ್ನು ಉರಿಯುತ್ತಿತ್ತು, ಹಾಗೂ ಅಲಂಕರಿಸಿದ ಹೂಗಳು ಕೂಡ ಬಾಡದೇ ಹಾಳಾಗಿರಲಿಲ್ಲ, ಈ ಪವಾಡ ಕಂಡು ಜನರು ಪಾವನರಾಗಿದ್ದಾರೆ.

ಇಂದು ಮುಂಜಾನೆಯೇ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ ಭಕ್ತರು ಹಾಸನಾಂಬೆಯ ದರ್ಶನ ಪಡೆಯಲು ಸರದಿಯ ಸಾಲಿನಲ್ಲಿ ನಿಂತಿದ್ದಾರೆ.ಕಿಲೋಮೀಟರ್ ವರೆಗೂ ಭಕ್ತರ ಸರದಿ ಸಾಲು ಹರಿದಿದೆ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ದರ್ಶನಕ್ಕಾಗಿ ರಾಜ್ಯ ಮಾತ್ರವಲ್ಲದೆ, ಹೊರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಬರುತ್ತಾರೆ.

ನ.2 ರಿಂದ 15ರವರೆಗೆ ಹಾಸನಾಂಬ ದೇವಾಲಯ ಬಾಗಿಲು ತೆರೆಯಲಿದ್ದು, ಈ 14 ದಿನ ಗಳಲ್ಲಿ 12 ದಿನಗಳ ಕಾಲ ಮಾತ್ರ ಹಾಸನಾಂಬೆ ದೇವಿ ದರ್ಶನ ನೀಡಲಿದ್ದಾಳೆ. ಮೊದಲ ಹಾಗೂ ಕೊನೆಯ ದಿನ ದರ್ಶನ ಇರುವುದಿಲ್ಲ. ಉಳಿದಂತೆ ಎಲ್ಲ ದಿನಗಳು ದಿನದ 24 ಗಂಟೆ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...