alex Certify ಪೋಷಕರಿಗೆ ನೆಮ್ಮದಿ ಸುದ್ದಿ: ಶಾಲೆಗಳಲ್ಲಿ ಶುಲ್ಕ ಬಾಕಿ ಕಾರಣಕ್ಕೆ ಹಾಲ್ ಟಿಕೆಟ್ ನಿರಾಕರಿಸುವಂತಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರಿಗೆ ನೆಮ್ಮದಿ ಸುದ್ದಿ: ಶಾಲೆಗಳಲ್ಲಿ ಶುಲ್ಕ ಬಾಕಿ ಕಾರಣಕ್ಕೆ ಹಾಲ್ ಟಿಕೆಟ್ ನಿರಾಕರಿಸುವಂತಿಲ್ಲ

ಬೆಂಗಳೂರು: ಶಾಲಾ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ನಿರಾಕರಿಸುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಸದನದಲ್ಲಿ ಶಾಸಕ ಆರ್. ರಂಗನಾಥ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ಖಾಸಗಿ ಅನುದಾನಿತ ಶಾಲೆಗಳಲ್ಲಿ ಶುಲ್ಕ ಬಾಕಿ ಉಳಿಸಿಕೊಂಡ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿರಾಕರಿಸಬಾರದು. ಶಿಕ್ಷಣ ಇಲಾಖೆ ಅಧಿಕಾರಿಗಳ ಮೂಲಕ ಆಯಾ ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಹಾಲ್ ಟಿಕೆಟ್ ಕೊಡದೇ ವಿದ್ಯಾರ್ಥಿಗಳನ್ನು ಹೊರಗೆ ನಿಲ್ಲಿಸಲಾಗುತ್ತಿದ್ದು, ಕೆಲವು ಶಾಲೆಗಳಲ್ಲಿ ಬೆದರಿಕೆ ಹಾಕಲಾಗುತ್ತಿದೆ. ಪೋಷಕರು, ವಿದ್ಯಾರ್ಥಿಗಳು ಸಂಕಷ್ಟದ ಬಗ್ಗೆ ಗಮನ ಹರಿಸಬೇಕೆಂದು ಶಾಸಕ ಆರ್. ಮಂಜುನಾಥ್ ಒತ್ತಾಯಿಸಿದಾಗ, ಸಚಿವರು ಪ್ರತಿಕ್ರಿಯೆ ನೀಡಿ, ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ನಿರಾಕರಿಸುವಂತಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...