![](https://kannadadunia.com/wp-content/uploads/2022/07/1600x960_1131185-farmers.jpg)
ಶಿವಮೊಗ್ಗ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಆರ್ಥಿಕ ನೆರವು ಪಡೆಯಲು ಇ -ಕೆವೈಸಿ ಮಾಡಿಸಬೇಕಿದೆ.
ಈಗಾಗಲೇ ಅರ್ಹ ರೈತ ಫಲಾನುಭವಿಗಳ ಖಾತೆಗೆ ಆರ್ಥಿಕ ಸಹಾಯಧನ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳು ತಮ್ಮ ತಾಲೂಕಿನ ಸಮೀಪದ ನಾಗರಿಕ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ ಅಥವಾ http://pmkisan.gov.in ಪೋರ್ಟಲ್ನ ಫಾರ್ಮರ್ಸ್ ಕಾರ್ನರ್ ಇ-ಕೆವೈಸಿ ಅವಕಾಶದಡಿ ಸೆಪ್ಟೆಂಬರ್ 22ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳಬೇಕಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.