alex Certify BIG NEWS: ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕೇಂದ್ರ ಸರ್ಕಾರದ ಕೃಷಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನಾನಿರತನಾಗಿದ್ದ ರೈತ ದೆಹಲಿಯ ಸಿಂಘು ಗಡಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೃತ ರೈತನನ್ನು ಪಂಜಾಬ್​ನ ಅಮ್ರೋಹ್​ ಜಿಲ್ಲೆಯ ನಿವಾಸಿ ಗುರುಪ್ರೀತ್​​ ಸಿಂಗ್​ ಎಂದು ಗುರುತಿಸಲಾಗಿದೆ.

ಮೃತ ಗುರುಪ್ರೀತ್​ ಸಿಂಗ್,​ ಭಾರತೀಯ ಕಿಸಾನ್​ ಸಂಘಟನೆಯ ಜಗ್ಜೀತ್​ ಸಿಂಗ್​ ದಲ್ಲೆವಾಲ್​ ಜೊತೆ ನಿಕಟ ಸಂಬಂಧ ಹೊಂದಿದ್ದರು ಎಂದು ತಿಳಿದುಬಂದಿದೆ.
ಕುಂಡ್ಲಿ ಠಾಣಾ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು ತನಿಖೆ ಮುಂದುವರಿಸಿದ್ದಾರೆ. ಈ ಸಾವಿಗೆ ನಿಖರ ಕಾರಣ ಏನು ಎಂಬುದನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.

ಕಳೆದ ತಿಂಗಳಷ್ಟೇ ಲಖ್ಫೀರ್​ ಸಿಂಗ್​ ಎಂಬ ಕಾರ್ಮಿಕನ ಶವ ಸಿಂಘು ಗಡಿಯ ಬ್ಯಾರಿಕೇಡ್​​ಗೆ ಕಟ್ಟಿಡಲಾಗಿತ್ತು. ಮೃತ ಲಖ್ಬೀರ್​ ಸಿಂಗ್​ ದೇಹದಲ್ಲಿ ಹರಿತವಾದ ಆಯುಧದಿಂದ ಮಾಡಿದ ಗಾಯದ ಕಲೆಗಳು ಪತ್ತೆಯಾಗಿದ್ದವು. ಈ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದರು ಹಾಗೂ ಇನ್ನಿಬ್ಬರು ತಾವೇ ಪೊಲೀಸರಿಗೆ ಶರಣಾಗಿದ್ದರು.

ಸಾವಿರಾರು ರೈತರು ಅದರಲ್ಲೂ ಹೆಚ್ಚಾಗಿ ಪಂಜಾಬ್​, ಹರಿಯಾಣ ಹಾಗೂ ಉತ್ತರ ಪ್ರದೇಶದ ಪಶ್ಚಿಮ ಭಾಗದ ರೈತರು ದೆಹಲಿಯ ಸಿಂಘು ಹಾಗೂ ಟಿಕ್ರಿ ಗಡಿಗಳಲ್ಲಿ ಕಳೆದ ವರ್ಷ ನವೆಂಬರ್​ 26ರಿಂದ ಕೇಂದ್ರದ ಕೃಷಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಲೇ ಬಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...