alex Certify BIG NEWS: ಭೂಸ್ವಾಧೀನಕ್ಕೆ ವಿರೋಧ; ಗಾಂಧಿ ವೇಷ ಧರಿಸಿ ಬೀದಿಗಿಳಿದ ಅನ್ನದಾತ; ಪ್ರತಿಭಟನಾ ನಿರತ ರೈತರನ್ನು ವಶಕ್ಕೆ ಪಡೆದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೂಸ್ವಾಧೀನಕ್ಕೆ ವಿರೋಧ; ಗಾಂಧಿ ವೇಷ ಧರಿಸಿ ಬೀದಿಗಿಳಿದ ಅನ್ನದಾತ; ಪ್ರತಿಭಟನಾ ನಿರತ ರೈತರನ್ನು ವಶಕ್ಕೆ ಪಡೆದ ಪೊಲೀಸರು

 

ಬೆಂಗಳೂರು: ಶಿವರಾಮ್ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳುತ್ತಿರುವುದಕ್ಕೆ ರೈತರು ಪ್ರತಿಭಟನೆ ನಡೆಸುತ್ತಿದ್ದು, ಗಾಂಧಿ ವೇಷ ಧರಿಸಿ ವಿನೂತನ ಧರಣಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಲಹಂಕ ತಾಲೂಕಿನ 17 ಗ್ರಾಮಗಳ ರೈತರು ಬಿಡಿಎ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಬಿಳಿ ಪಂಚೆ, ಶಾಲು, ಟೋಪಿ ಮತ್ತು ಕೋಲು ಹಿಡಿದು ಗಾಂಧಿ ವೇಷ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.

BIG NEWS: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾಗೆ ಎದುರಾಯ್ತು ಸಂಕಷ್ಟ…!

ಶಿವರಾಮ ಕಾರಂತ ಬಡಾವಣೆಗಾಗಿ ಬಿಡಿಎ 3,500 ಎಕರೆ ಜಮೀನು ಭೂಸ್ವಾಧೀನ ಮಾಡಿಕೊಳ್ಳಲು ಮುಂದಾಗಿದೆ. ಯಲಹಂಕದ ಕೆಂಪೇಗೌಡ ವೃತ್ತದಿಂದ ಮಿನಿವಿಧಾನಸೌಧದವರೆಗೂ ಪಾದಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ರಾಮಗೊಂಡನಹಳ್ಳಿ ಬಳಿ ಪ್ರತಿಭಟನಾ ನಿರತ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...