alex Certify ರಾಜ್ಯದ ರೈತರೇ ಗಮನಿಸಿ : `ಫ್ರೂಟ್’ ತಂತ್ರಾಂಶದ ಆಧಾರದಲ್ಲಿ `ಬರ ಪರಿಹಾರ’ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತರೇ ಗಮನಿಸಿ : `ಫ್ರೂಟ್’ ತಂತ್ರಾಂಶದ ಆಧಾರದಲ್ಲಿ `ಬರ ಪರಿಹಾರ’ ವಿತರಣೆ

ಬೆಂಗಳೂರು : ಅಕ್ರಮಗಳನ್ನು ತಡೆಯುವುದಕ್ಕಾಗಿ ಫ್ರೂಟ್ಸ್‌ ದತ್ತಾಂಶದ ಆಧಾರದಲ್ಲಿ ಪರಿಹಾರ ವಿತರಣೆಗೆ ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬೆಳೆ ವಿಮೆ ನೋಂದಣಿಗೆ ಕನಿಷ್ಟ ಬೆಂಬಲ ಬೆಲೆಯಲ್ಲಿ, ಕೃಷಿ ಉತ್ಪನ್ನ ಮಾರಾಟ ಮಾಡಲು ಬೆಳೆ ಸಾಲ ಪಡೆಯಲು, ಬೆಳೆ ಹಾನಿಗೆ ಪರಿಹಾರ ಪಡೆಯಲು ಹಾಗೂ ಇತರೆ ಸೌಲಭ್ಯ ಪಡೆಯಲು ರೈತರ ಗುರುತಿನ ಸಂಖ್ಯೆ (ಎಫ್‌ಐಡಿ) ಕಡ್ಡಾಯವಾಗಿದೆ.

ಆದ್ದರಿಂದ  ಎಫ್‌ಐಡಿ (ರೈತರ ಗುರುತಿನ ಸಂಖ್ಯೆ) ಮಾಡಿಸದ  ರೈತರು ಕೂಡಲೇ ಕೃಷಿ ಅಥವಾ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ತಮ್ಮ ಆಧಾರ್ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್‌ಬುಕ್, ಮೊಬೈಲ್  ಸಂಖ್ಯೆಯೊಂದಿಗೆ ತೆರಳಿ ನೋಂದಣಿ ಮಾಡಿಸಿ ಎಫ್‌ಐಡಿ ಸಂಖ್ಯೆ ಪಡೆಯಬೇಕು. ದಾಖಲಿಸಿದ ಜಮೀನಿನ ವಿಸ್ತೀರ್ಣಗಳಿಗೆ ಮಾತ್ರ ಸರ್ಕಾರದ ಪರಿಹಾರ ಸೌಲಭ್ಯ ದೊರೆಯುವುದರಿಂದ ರೈತ ಬಾಂಧವರು ತಾವು ಹೊಂದಿರುವ ಎಲ್ಲಾ ಜಮೀನಿನ ಸರ್ವೆ ನಂಬರಗಳನ್ನು, ವಿಸ್ತೀರ್ಣಗಳನ್ನು ಕೂಡಲೇ ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಿಕೊಳ್ಳಬೇಕು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти жук Необычайная головоломка: находя 3 различия за 9 секунд, можно найти Коллекция для смелых и твердых: в поисках меча гладиатора