alex Certify ರೈತರಿಗೆ ಗುಡ್ ನ್ಯೂಸ್: ಇನ್ನು ನಿವೇಶನಕ್ಕಾಗಿ KHB ಭೂಸ್ವಾಧೀನ ಇಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಇನ್ನು ನಿವೇಶನಕ್ಕಾಗಿ KHB ಭೂಸ್ವಾಧೀನ ಇಲ್ಲ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ಇನ್ನು ಮುಂದೆ ರೈತರಿಂದ ಭೂ ಸ್ವಾಧೀನ ಮಾಡಿ ಜನರಿಗೆ ಸೈಟು, ಮನೆ ಹಂಚಿಕೆ ಮಾಡುವುದಿಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ರೈತರೇ 50 ಎಕರೆ ಅಥವಾ ಅದಕ್ಕಿಂತ ಹೆಚ್ಚು ಜಮೀನು ನೀಡಲು ಮುಂದಾದರೆ ಅವರ ಸಹಭಾಗಿತ್ವದಲ್ಲಿ ಬಡಾವಣೆ ಅಭಿವೃದ್ಧಿಪಡಿಸಿ ನಿವೇಶನ ಹಂಚಿಕೆ ಮಾಡಲಾಗುವುದು. ಶೇ. 40 ರಷ್ಟು ಭೂಮಿಯನ್ನು ರೈತರಿಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಗೃಹ ಮಂಡಳಿಯಿಂದ ಭೂಸ್ವಾಧೀನ ಪ್ರಕ್ರಿಯೆ ನಡೆಸದಿರಲು ತೀರ್ಮಾನಿಸಲಾಗಿದೆ. ರೈತರೇ ಸಹಭಾಗಿತ್ವ ನೀಡಿದಲ್ಲಿ ಒಪ್ಪಂದ ಮಾಡಿಕೊಂಡು ನಿವೇಶನಗಳನ್ನು ಅಭಿವೃದ್ಧಿಪಡಿಸಲಾಗುವುದು. ತಾಲೂಕು ಮಟ್ಟದಲ್ಲಿ ಶೇಕಡ 40ರಷ್ಟು ಭೂಮಿಯನ್ನು ರೈತರಿಗೆ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಶೇಕಡ 50ರಷ್ಟು ಭೂಮಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...