alex Certify ರೈತರು ಸೇರಿ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ವಿವಿಧ ಯೋಜನೆಯಡಿ ಶೂನ್ಯ ಬಡ್ಡಿ ದರ ಸಾಲ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರು ಸೇರಿ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ವಿವಿಧ ಯೋಜನೆಯಡಿ ಶೂನ್ಯ ಬಡ್ಡಿ ದರ ಸಾಲ ಸೌಲಭ್ಯ

ಬೆಂಗಳೂರು: ರೈತರು, ಸದಸ್ಯ ನೇಕಾರರಿಗೆ ವಿವಿಧ ಯೋಜನೆಗಳಡಿ ಶೂನ್ಯ ಬಡ್ಡಿ ದರದಲ್ಲಿ ಆನೇಕಲ್ ತಾಲೂಕಿನ ಬಿಡಿಸಿಸಿ ಬ್ಯಾಂಕಿನಲ್ಲಿ ಸಾಲ ಸೌಲಭ್ಯ ನೀಡಲಾಗುವುದು. ಗೃಹ ನಿರ್ಮಾಣ, ವಾಹನ ಖರೀದಿಗೂ ಸಾಲ ನೀಡಲಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ನಿರ್ದೇಶಕ ವಿ.ಹೆಚ್. ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ.

ಮಾಸಿಕ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೂನ್ಯ ಬಡ್ಡಿ ದರದಲ್ಲಿ ವಾರ್ಷಿಕ ಬೆಳೆಗಳಿಗೆ 5 ಲಕ್ಷ ರೂ., ಹೈನುಗಾರಿಕೆ ನಿರ್ವಹಣೆಗೆ 2 ಲಕ್ಷ ರೂ., ಮೀನುಗಾರಿಕೆಗೆ 3 ಲಕ್ಷ ರೂ., ಸ್ವಸಹಾಯ ಗುಂಪುಗಳಿಗೆ 5 ಲಕ್ಷ ರೂ. ಸಾಲ ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಾರ್ಷಿಕ ಶೇಕಡ 3ರ ಬಡ್ಡಿ ದರದಲ್ಲಿ ನೇಕಾರಿಕೆಗೆ 5 ಲಕ್ಷ ರೂ., ಕೋಳಿ, ಕುರಿ, ಹಂದಿ ಸಾಕಾಣಿಕೆಗೆ 15 ಲಕ್ಷ ರೂ., ಹಸು ಸಾಕಾಣಿಕೆಗೆ 10 ಲಕ್ಷ ರೂ., ಸ್ಥಿರಾಸ್ತಿ ಭದ್ರತೆಯ ಮೇಲೆ ಒಒಡಿ ಸಾಲ, ಚಿನ್ನಾಭರಣ ಸಾಲ, ಕಟ್ಟಡ ನಿರ್ಮಾಣ, ಖರೀದಿಗೆ ಸಾಲ ಸೌಲಭ್ಯ ಇದೆ ಎಂದು ತಿಳಿಸಿದ್ದಾರೆ.

ಅಲ್ಲದೆ, ರಸಗೊಬ್ಬರಗಳನ್ನು ವಿಎಸ್ಎಸ್ಎನ್ ಸೊಸೈಟಿ ಮೂಲಕ ಸರ್ಕಾರದ ನಿಗದಿತ ಬೆಲೆಗೆ ಸಿಗುವಂತೆ ವ್ಯವಸ್ಥೆ ಮಾಡಲಾಗಿದ್ದು, ಇದರ ಸೌಲಭ್ಯ ಪಡೆದುಕೊಳ್ಳುವಂತೆ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...