alex Certify ಶಿವಮೊಗ್ಗದಲ್ಲಿ ರೈತ ಮಹಾ ಪಂಚಾಯತ್ ರಣಕಹಳೆ: ರಾಕೇಶ್ ಟಿಕಾಯತ್ ಸೇರಿ ಹಲವರು ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ ರೈತ ಮಹಾ ಪಂಚಾಯತ್ ರಣಕಹಳೆ: ರಾಕೇಶ್ ಟಿಕಾಯತ್ ಸೇರಿ ಹಲವರು ಭಾಗಿ

ಶಿವಮೊಗ್ಗ: ಹಲವು ಹೋರಾಟಗಳ ತವರೂರಾದ ಶಿವಮೊಗ್ಗದಲ್ಲಿ ದಕ್ಷಿಣ ಭಾರತದ ಮೊದಲ ಮಹಾ ಪಂಚಾಯತ್ ನಡೆದಿದ್ದು, ರೈತ ಸಾಗರವೇ ಹರಿದು ಬಂದಿದೆ.

ರಾಷ್ಟ್ರೀಯ ಕಿಸಾನ್ ಯೂನಿಯನ್ ನಾಯಕರಾದ ರಾಕೇಶ್ ಟಿಕಾಯತ್, ಡಾ. ದರ್ಶನ್ ಪಾಲ್, ಯದುವೀರ್ ಸಿಂಗ್, ರಾಜ್ಯ ರೈತ ನಾಯಕರಾದ ಕೆ.ಟಿ. ಗಂಗಾಧರ್, ಹೆಚ್.ಆರ್. ಬಸವರಾಜಪ್ಪ, ಕೋಡಿಹಳ್ಳಿ ಚಂದ್ರಶೇಖರ್, ಚುಕ್ಕಿ ನಂಜುಂಡಸ್ವಾಮಿ, ಹೋರಾಟಗಾರರಾದ ಕೆ.ಪಿ. ಶ್ರೀಪಾಲ್, ಎಂ. ಶ್ರೀಕಾಂತ್, ಕೆ.ಎಲ್. ಅಶೋಕ್, ಮಾಜಿ ಶಾಸಕ ಮಧು ಬಂಗಾರಪ್ಪ ಕಿಮ್ಮನೆ ರತ್ನಾಕರ್ ಮೊದಲಾದವರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಸಮಾವೇಶದಲ್ಲಿ ಆಕ್ರೋಶ ವ್ಯಕ್ತವಾಗಿದೆ. ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಹಿರಿಯ ರೈತ ನಾಯಕ ಕೆ.ಟಿ. ಗಂಗಾಧರ್ ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...