alex Certify BIG NEWS: ಮಾರ್ಚ್ 26 ರಂದು ಭಾರತ್ ಬಂದ್ ಗೆ ಕರೆ ನೀಡಿದ ರೈತರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾರ್ಚ್ 26 ರಂದು ಭಾರತ್ ಬಂದ್ ಗೆ ಕರೆ ನೀಡಿದ ರೈತರು

ನವದೆಹಲಿ: ಕೃಷಿ ತಿದ್ದುಪಡೆ ಕಾಯ್ದೆಗಳನ್ನು ವಿರೋಧಿಸಿ ಕಳೆದ 4 ತಿಂಗಳಿಂದ ಹೋರಾಟ ಕೈಗೊಂಡಿರುವ ರೈತರು ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಮಾರ್ಚ್ 26 ರಂದು ರಾಷ್ಟ್ರವ್ಯಾಪಿ ಸಂಪೂರ್ಣ ಬಂದ್ ಗೆ ಕರೆ ನೀಡಿದ್ದಾರೆ.

ಸಂಪೂರ್ಣ ಭಾರತ್ ಬಂದ್ ಗೆ ಕರೆ ನೀಡಲಾಗಿದೆ ಎಂದು ರೈತ ಸಂಘಟನೆಗಳ ಪದಾಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಮಾರ್ಚ್ 15 ರಂದು ರೈತ ಸಂಘಟನೆ, ಕಾರ್ಮಿಕ ಸಂಘಟನೆಗಳಿಂದ ಖಾಸಗೀಕರಣ ಮತ್ತು ಇಂಧನ ಬೆಲೆ ಏರಿಕೆ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪದಾಧಿಕಾರಿಗಳು ಹೇಳಿದ್ದಾರೆ.

ಮಾರ್ಚ್ 26 ರಂದು ಹೋರಾಟಕ್ಕೆ ನಾಲ್ಕು ತಿಂಗಳು ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಭಾರತ್ ಬಂದ್ ಗೆ ಕರೆ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...